ಕದಿಕಡ್ಕ: ಸ.ಹಿ.ಪ್ರಾ.ಶಾಲೆಯಲ್ಲಿ ಲಂಚ – ಭ್ರಷ್ಟಾಚಾರ ವಿರೋಧಿ ಫಲಕ ಅಳವಡಿಕೆ

0

ಜಾಲ್ಸೂರು ಗ್ರಾಮದ ಕದಿಕಡ್ಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಲಂಚ – ಭ್ರಷ್ಟಾಚಾರ ವಿರೋಧಿ ಪ್ರತಿಜ್ಞೆ ಸ್ವೀಕಾರ ಹಾಗೂ ಫಲಕ ಅಳವಡಿಕೆ ಕಾರ್ಯಕ್ರಮವು ಜೂ.24ರಂದು ಬೆಳಿಗ್ಗೆ ಜರುಗಿತು.

ಸುದ್ದಿ ಬಿಡುಗಡೆ ಪತ್ರಿಕೆಯ ಕಛೇರಿ ವ್ಯವಸ್ಥಾಪಕ ಯಶ್ವಿತ್ ಕಾಳಂಮನೆ ಅವರು ಲಂಚ – ಭ್ರಷ್ಟಾಚಾರ ವಿರೋಧಿ ಆಂದೋಲನದ ಕುರಿತು ಮಾತನಾಡಿ, ವಿದ್ಯಾರ್ಥಿಗಳಿಗೆ ಪ್ರತಿಜ್ಜಾವಿಧಿ ಬೋಧಿಸಿದರು.


ಬಳಿಕ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಾರಿಜ ಅವರಿಗೆ ಫಲಕ ಹಸ್ತಾಂತರ ಮಾಡಲಾಯಿತು.
ಈ ಸಂದರ್ಭದಲ್ಲಿ ಸುದ್ದಿ ವರದಿಗಾರ ವಿನಯ್ ಜಾಲ್ಸೂರು , ಶಾಲಾ ಸಹಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.