ಸುಳ್ಯ ಗೌಡರ ಯುವ ಸೇವಾ ಸಂಘದ ವಾರ್ಷಿಕ ಮಹಾಸಭೆ

0

ಶಾಸಕಿ‌ ಭಾಗೀರಥಿ ಮುರುಳ್ಯ, ಕು.ಮಧುಶ್ರೀ‌ ಕೆದಂಬಾಡಿಯವರಿಗೆ ಸನ್ಮಾನ

ಸುಳ್ಯದ ಗೌಡರ ಯುವ ಸೇವಾ ಸಂಘ ಹಾಗೂ ಗೌಡ ಸೋಶಿಯೋ ಎಜ್ಯುಕೇಶನ್ ಫೌಂಡೇಶನ್ ಇದರ 2022-23 ನೇ ವಾರ್ಷಿಕ ಮಹಾಸಭೆಯು ಜೂ.24ರಂದು ಕೊಡಿಯಾಲಬೈಲ್ ನ ಗೌಡರ ಯುವ ಸೇವಾ ಸಂಘದ ಸಭಾಂಗಣದಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ಚಂದ್ರಾ ಕೋಲ್ಚಾರ್ ಅಧ್ಯಕ್ಷತೆ ವಹಿಸಿದ್ದರು.
ಸುಳ್ಯ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಪಿ.ಸಿ. ಜಯರಾಮ, ಸಂಘದ ಸ್ಥಾಪಕಾಧ್ಯಕ್ಷ ನಿತ್ಯಾನಂದ ಮುಂಡೋಡಿ, ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಪುಷ್ಪವತಿ ಮಾಣಿಬೆಟ್ಟು, ಉಪಾಧ್ಯಕ್ಷ ವಸಂತ್ ಕುಮಾರ್ ಕಿರಿಭಾಗ ವೇದಿಕೆಯಲ್ಲಿ ಇದ್ದರು.

ಸನ್ಮಾನ : ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿಯಾಗಿ ಆಯ್ಕೆಯಾದ ಕು.ಭಾಗೀರಥಿ ಮುರುಳ್ಯ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಅತ್ಯುತ್ತಮ ಸಾಧನೆಗೈದ ಕು.ಮಧುಶ್ರೀಯವರನ್ನು ಸನ್ಮಾನಿಸಲಾಯಿತು.

ಗೌಡರ ಯುವ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಬೆಳ್ಯಪ್ಪ ಗೌಡ ಬಳ್ಳಡ್ಕ ಸಂಘದ ವರದಿ ಮಂಡಿಸಿದರು. ಎಂ.ಜಿ.ಎಂ. ಶಾಲಾ ಸಂಚಾಲಕ ದೊಡ್ಡಣ್ಣ ಬರೆಮೇಲು ಶಾಲೆ ಚಟುವಟಿಕೆ ಕುರಿತು ವರದಿ ಮಂಡಿಸಿದರು. ಸಂಘದ ಉಪಾಧ್ಯಕ್ಷ ಸದಾನಂದ ಮಾವಜಿ ಸ್ವಾಗತಿಸಿದರು. ಕೋಶಾಧಿಕಾರಿ ಚಂದ್ರಶೇಖರ ಮೇರ್ಕಜೆ ಲೆಕ್ಕಪತ್ರ ಮಂಡಿಸಿದರು. ಯುವ ಘಟಕದ ಅಧ್ಯಕ್ಷ ರಜತ್ ಅಡ್ಕಾರ್ ವಂದಿಸಿದರು. ಎ.ವಿ. ತೀರ್ಥರಾಮ‌ ಹಾಗೂ ಪಿ.ಎಸ್.‌ಗಂಗಾಧರ್ ಸನ್ಮಾನಿತರನ್ನು ಪರಿಚಯಿಸಿದರು. ಉಪಾಧ್ಯಕ್ಷ
ದಾಮೋದರ ನಾರ್ಕೋಡು ಕಾರ್ಯಕ್ರಮ ನಿರೂಪಿಸಿದರು.