ಪೈಚಾರು ಸೇತುವೆ ಬಳಿ ನೀರು ತುಂಬಿ ವಾಹನ ಸವಾರರ ಪರದಾಟ

0

ಪೈಚಾರು ಬಳಿ ಮಾಣಿ ಮೈಸೂರು ಹೆದ್ದಾರಿಯಲ್ಲಿ ಸೇತುವೆ ಕಾಮಗಾರಿ ನಡೆಯುತ್ತಿದ್ದು, ಇದೀಗ ಮಳೆ ಬಂದ ಹಿನ್ನೆಲೆಯಲ್ಲಿ ಈ ಭಾಗದ ನೀರು ರಸ್ತೆಯಲ್ಲಿ ತುಂಬಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಸಂಬಂಧಪಟ್ಟವರು ಕೂಡಲೇ ಇತ್ತ ಗಮನ ಹರಿಸಿ ನೀರು ಹೊರಹೋಗುವ ವ್ಯವಸ್ಥೆಯನ್ನು ಕಲ್ಪಿಸಬೇಕಾಗಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.