ಎಣ್ಮೂರು ಸರಕಾರಿ ಪ್ರೌಢಶಾಲೆಯಲ್ಲಿ ಲಂಚ ಭ್ರಷ್ಟಾಚಾರ ವಿರೋಧಿ ಪ್ರತಿಜ್ಞಾ ಸ್ವೀಕಾರ

0

ಸುದ್ದಿ ಜನಾಂದೋಲನ ವೇದಿಕೆಯ ಮೂಲಕ ನಡೆಯುತ್ತಿರುವ ಲಂಚ ಭ್ರಷ್ಟಾಚಾರ ವಿರೋಧಿ ಆಂದೋಲನದ ಅಂಗವಾಗಿ ಎಣ್ಮೂರು ಸರಕಾರಿ ಪ್ರೌಢಶಾಲೆಯಲ್ಲಿ ಲಂಚ ಭ್ರಷ್ಟಾಚಾರ ವಿರೋಧ ಪ್ರತಿಜ್ಞಾ ಸ್ವಿಕಾರ ಕಾರ್ಯಕ್ರಮ ಜೂ. 26ರಂದು ನಡೆಯಿತು. ಸಹಶಿಕ್ಷಕರಾದ ಲಿಂಗಪ್ಪ ಬೆಳ್ಳಾರೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸುದ್ದಿ ವರದಿಗಾರ ಈಶ್ವರ ವಾರಣಾಶಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ವಿದ್ಯಾರ್ಥಿ ನಾಯಕ 10ನೇ ತರಗತಿಯ ದೀಪಕ್ ಪ್ರತಿಜ್ಞಾ ವಿಧಿ ಬೋಧಿಸಿದರು. ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಘೋಷಣೆಯನ್ನು ಪುನರುಚ್ಚರಿಸಿದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸುಮಿತ್ರಾ ಕೆ, ಸಹಶಿಕ್ಷಕಿಯರಾದ ಸಾವಿತ್ರಿ ಕೆ, ಉಷಾ ಕೆಎಸ್, ಸಂತೋಷ್, ಗುಣಶ್ರೀ, ಮೋಹನ ಎ, ದಿವ್ಯ ಎಂ.ಕೆ, ಸುಪ್ರಿತಾ ಮತ್ತು ವಿದ್ಯಾರ್ಥಿಗಳು, ಸುದ್ದಿ ಪ್ರತಿನಿಧಿ ಸಂಕಪ್ಪ ಸಾಲ್ಯಾನ್, ಸಿಬ್ಬಂದಿ ಕು. ಬೃಂದಾ ಪೂಜಾರಿ ಮುಕ್ಕೂರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.