ಗೃಹಜೋತಿ ಯೋಜನೆಗೆ ಆನ್ಲೈನ್ ಅರ್ಜಿ ಸಲ್ಲಿಕೆ

0

ತಮ್ಮವಾರ್ಡ್ ನಲ್ಲಿ ವ್ಯವಸ್ಥೆ ಕಲ್ಪಿಸಿದ ನ.ಪಂ. ಸದಸ್ಯ ಎಂ.ವೆಂಕಪ್ಪಗೌಡ

ಸುಳ್ಯದ ಕೆರೆಮೂಲೆ ವಾರ್ಡಿನಲ್ಲಿ ವಾರ್ಡ್ ಸದಸ್ಯ ಎಂ.ವೆಂಕಪ್ಪಗೌಡರ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಗೃಹಜೋತಿ ಯೋಜನೆಯ ಆನ್ಲೈನ್ ಅರ್ಜಿ ಸಲ್ಲಿಕೆಗೆ ಜೂ.26 ರಂದು ಚಾಲನೆ ನೀಡಲಾಯಿತು.
ಸ್ಥಳೀಯ ನಿವಾಸಿ ಅಬ್ದುಲ್ ಮಜೀದ್ ಜನತಾ ರವರ ನಿವಾಸದಲ್ಲಿ ಆನ್ಲೈನ್ ಅರ್ಜಿ ಸಲ್ಲಿಸಲು ವ್ಯವಸ್ಥೆ ಕಲ್ಪಿಸಲಾಗಿತ್ತು. ಸ್ಥಳೀಯ ನಗರ ಪಂಚಾಯತ್ ಸದಸ್ಯ ಎಂ ವೆಂಕಪ್ಪಗೌಡ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಾರ್ಡಿನ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಎಂ ವೆಂಕಪ್ಪ ಗೌಡರು ರಾಜ್ಯ ಸರ್ಕಾರದ ಗೃಹ ಜ್ಯೋತಿ ಯೋಜನೆಯನ್ನು ನಮ್ಮ ವಾರ್ಡಿನ ಪ್ರತಿಯೊಂದು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು ವಾರ್ಡಿನ ಎಲ್ಲಾ ಫಲಾನುಭವಿಗಳಿಗೂ ಅರ್ಜಿ ಸಲ್ಲಿಸುವ ಅವಕಾಶವನ್ನು ನೀಡಲಾಗುವುದು ಎಂದು ಹೇಳಿದರು.


ಈ ಸಂದರ್ಭದಲ್ಲಿ ನಗರ ಪಂಚಾಯತ್ ಸದಸ್ಯರುಗಳಾದ ಡೇವಿಡ್ ಧೀರಾ ಕ್ರಾಸ್ತ, ಶರೀಫ್ ಕಂಠಿ,ರಿಯಾಜ್ ಕಟ್ಟೆಕ್ಕಾರ್ಸ್, ಮನೆ ಮಾಲಕ ಅಬ್ದುಲ್ ಮಜೀದ್ ಜನತಾ, ಹಿರಿಯರಾದ ಹಾಜಿ ಅಬ್ದುಲ್ ಹಮೀದ್ ಜನತಾ ಮೊದಲಾದವರು ಉಪಸ್ಥಿತರಿದ್ದರು.