ಸುಳ್ಯ ವೆಂಕಟರಮಣ ಸೊಸೈಟಿಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

0


ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಸೊಸೈಟಿಯ ಮದುವೆಗದ್ದೆ ಭೋಜಪ್ಪ ಗೌಡ ಸಭಾಂಗಣದಲ್ಲಿ ಇಂದು ಆಚರಿಸಲಾಯಿತು.

ವೆಂಕಟರಮಣ ಸೊಸೈಟಿ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ನಿತ್ಯಾನಂದ ಮುಂಡೋಡಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ,ನಮನ ಸಲ್ಲಿಸಿದರು.


ಈ ಸಂದರ್ಭದಲ್ಲಿ ಸೊಸೈಟಿ ಅಧ್ಯಕ್ಷ ಪಿ.ಸಿ .ಜಯರಾಮ್ ,ಉಪಾಧ್ಯಕ್ಷ ಮೋಹನ್ ರಾಮ್ ಸುಳ್ಳಿ ,ನಿರ್ದೇಶಕರುಗಳಾದ ಸದಾನಂದ ಜಾಕೆ, ಚಂದ್ರ ಕೋಲ್ಚಾರ್, ಪಿ.ಎಸ್. ಗಂಗಾಧರ್ ,ಕೆ.ಸಿ. ನಾರಾಯಣ ಗೌಡ, ದಾಮೋದರ ಗೌಡ ನಾರ್ಕೋಡು, ಕೆ.ಸಿ.ಸದಾನಂದ ,ದಿನೇಶ್ ಮಡಪ್ಪಾಡಿ, ಶೈಲೇಶ್ ಅಂಬೆಕಲ್ಲು ,ಹೇಮಚಂದ್ರ ಐ.ಕೆ., ನವೀನ್ ಕುಮಾರ್ ಜಾಕೆ, ಶ್ರೀಮತಿ ನಳಿನಿಸೂರಯ್ಯ, ಮುಖ್ಯ ಕಾರ್ಯನಿರ್ವಣಾಧಿಕಾರಿ ಕೆ.ಟಿ.ವಿಶ್ವನಾಥ್ ,ಮಹಾತ್ಮ ಗಾಂಧಿ ಮಲ್ನಾಡ್ ವಿದ್ಯಾಸಂಸ್ಥೆಯ ಸಂಚಾಲಕ ದೊಡ್ಡಣ್ಣ ಬರೆಮೇಲು,ಗೌಡರ ಯುವ ಸೇವಾ ಸಂಘದ ಕಾರ್ಯದರ್ಶಿ ಬೆಳ್ಯಪ್ಪ ಗೌಡ ,ಕೋಶಾಧಿಕಾರಿ ಚಂದ್ರಶೇಖರ ಮೇರ್ಕಜೆ,ಎಸ್.ಆರ್. ಸೂರಯ್ಯ ,ವೆಂಕಟ್ರಮಣ ಸೊಸೈಟಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು