ಕಲ್ಮಡ್ಕ ಗ್ರಾ.ಪಂ.ನಲ್ಲಿ ಗೃಹ ಜ್ಯೋತಿಯ ಅರ್ಜಿ ನೊಂದಣಿ ಕಾರ್ಯಕ್ರಮ

0


ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿಯ ಅರ್ಜಿ ನೊಂದಣಿ ಕಾರ್ಯಕ್ರಮದ ಉದ್ಘಾಟನೆಯನ್ನುಜೂ. ೨೮ ರಂದು ಕಲ್ಮಡ್ಕ ಗ್ರಾಮ ಪಂಚಾಯತ್ ಕಛೇರಿಯಲ್ಲಿ ನಡೆಸಲಾಯಿತು. ಪಂಚಾಯತಿನ ಅಧ್ಯಕ್ಷರಾದ ಶ್ರೀಮತಿ ಹಾಜಿರಾ ಗಫೂರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮಹೇಶ್ ಕುಮಾರ್ ಕರಿಕ್ಕಳ ಮತ್ತು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಧರ್ಮಣ್ಣ ನಾಯ್ಕ ಇವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸದಸ್ಯರಾದ ಲೋಕೇಶ್ ಆಕ್ರಿಕಟ್ಟೆ, ಶ್ರೀಮತಿ ಪವಿತ್ರ ಕುದ್ವ, ಹರೀಶ್ ಎಂ, ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯ ಫಲಾನುಭವಿಗಳು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ಪ್ರವೀಣ್ ಕುಮಾರ್ ಸಿ.ವಿ. ಸ್ವಾಗತಿಸಿ, ವಂದಿಸಿದರು.