ದರ್ಖಾಸ್ತು ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ

0

ಅಧ್ಯಕ್ಷರಾಗಿ ಪ್ರೇಮಲತಾ ಬಿ.ರೈ, ಉಪಾಧ್ಯಕ್ಷರಾಗಿ ಶಿವಶಂಕರ ಭಟ್ ಚೀಮುಳ್ಳು

ದರ್ಖಾಸ್ತು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಪ್ರೇಮಲತಾ ಬಿ. ರೈ ಮತ್ತು ಉಪಾಧ್ಯಕ್ಷರಾಗಿ ಶಿವಶಂಕರ ಭಟ್ ಚೀಮುಳ್ಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಂಘದ ಆಡಳಿತ ಮಂಡಳಿಯ 13 ನಿರ್ದೇಶಕರ ಸ್ಥಾನಕ್ಕೆ 11 ಮಂದಿ ನಾಮಪತ್ರ ಸಲ್ಲಿಸಿದ್ದು ನಾಮಪತ್ರ ಸಲ್ಲಿಸಿದ್ದ ಎಲ್ಲರೂ ಅವಿರೋಧವಾಗಿ ಆಯ್ಕೆಯಾಗಿದ್ದರು.ಜೂ.28 ರಂದು ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಷ,ಉಪಾಧ್ಯಕ್ಷರ ಅವಿರೋಧ ಆಯ್ಕೆ ನಡೆಯಿತು.
ಪುತ್ತೂರು ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಯ ಮಾರಾಟಾಧಿಕಾರಿ ಶೋಭಾ ಎನ್.ಎಸ್.ಚುನಾವಣಾಧಿಕಾರಿಯಾಗಿ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.


ಈ ಸಂದರ್ಭದಲ್ಲಿ ನಿರ್ದೇಶಕರಾದ
ಸತ್ಯಶಂಕರ ಸಿ, ನಾಗೇಶ ಚೂಂತಾರು,ಗೋವಿಂದ ಮಣಿಯಾಣಿ ಚೂಂತಾರು, ವಿನ್ಯಾಸ್ ಕಾವಿನಮೂಲೆ, ಕಾಮಿಲ್ ಫೆರಾವೋ ನೇಲ್ಯಮಜಲು, ಆರ್.ಕೆ.ಶ್ಯಾಮ್ ಪ್ರಸಾದ್ ಕುರುಂಬುಡೇಲು, ಬಾಲಕೃಷ್ಣ ಚೀಮುಳ್ಳು, ಸುಂದರ ಪುಡ್ಕಜೆ, ಪ್ರವೀಣ ಶೆಟ್ಟಿ ಪುಡ್ಕಜೆ ಉಪಸ್ಥಿತರಿದ್ದರು.
ಸಂಘದ ಕಾರ್ಯದರ್ಶಿ ಶ್ರೀಮತಿ ಶಕುಂತಳಾ ನಾಗರಾಜ್ ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು.