ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

0

ಲಯನ್ಸ್ ಕ್ಲಬ್ ಸುಬ್ರಹ್ಮಣ್ಯ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜೂ.28 ರಂದು
ಮಹಮ್ಮಾಯ ರೆಸಿಡೆನ್ಸಿ ಸುಬ್ರಹ್ಮಣ್ಯ ಇಲ್ಲಿ ನಡೆಯಿತು.

ಲಯನ್ಸ್ ನ 23-317 D ರ ದ್ವಿತೀಯ ಉಪ ಜಿಲ್ಲಾ ರಾಜ್ಯಪಾಲ ಕುಡ್ಲಿ ಅರವಿಂದ ಶೆಣೈ ಪದಗ್ರಹಣವನ್ನು ನಡೆಸಿಕೊಟ್ಟರು. ಲಯನ್ಸ್ ನ ಮುಖ್ಯ ವಿಸ್ತರಣ ಅಧ್ಯಕ್ಷ
ಜಯರಾಮ ದೇರಪ್ಪಜ್ಜನಮನೆ ಚಾರ್ಟರ್ ನೈಟ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.


ವೇದಿಕೆಯಲ್ಲಿ ನಿಕಟ ಪೂರ್ವಾಧ್ಯಕ್ಷ ಕೆ‌. ರಂಗಯ್ಯ ಶೆಟ್ಟಿಗಾರ್, ಕಾರ್ಯದರ್ಶಿ ಸತೀಶ್ ಕೂಜುಗೋಡು, ನೂತನ ಅಧ್ಯಕ್ಷ ರಾಮಚಂದ್ರ ಪಳಂಗಾಯ, ಚಂದ್ರಶೇಖರ ಪಾನತ್ತಿಲ ಉಪಸ್ಥಿತರಿದ್ದರು. ಕೆ.ಆರ್ ಶೆಟ್ಟಿಗಾರ್ ಸ್ವಾಗತಿಸಿ, ಸತೀಶ್ ಕೂಜುಗೋಡು ವಂದಿಸಿದರು. ವಿಮಲಾ ರಂಗಯ್ಯ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಐನೆಕಿದು ಶಾಲಾ ಶೈಕ್ಷಣಿಕ ಪ್ರಗತಿಗೆ ರೂ.10 ಸಾವಿರ ಸಹಾಯಧನ ವಿತರಿಸಲಾಯಿತು.