ಪೆರಾಜೆ : ಬಿಜೆಪಿ ಕಾರ್ಯಕರ್ತರ ಸಭೆ

0

ಸಂಸದ ಪ್ರತಾಪ್ ಸಿಂಹ – ಮಾಜಿ ಶಾಸಕ ಭೋಪಯ್ಯ ಉಪಸ್ಥಿತಿ

ಪೆರಾಜೆ ಬಿಜೆಪಿ ಕಾರ್ಯಕರ್ತರ, ಮತದಾರರ, ಚುನಾಯಿತ ಪ್ರತಿನಿಧಿಗಳ ಸಭೆಯು ಶ್ರೀ ಅನ್ನಪೂರ್ಣೇಶ್ವರಿ ಸಭಾಂಗಣದಲ್ಲಿ ಜು.1ರಂದು ಬೆಳಿಗ್ಗೆ ಜರುಗಿತು.

ಪೆರಾಜೆ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ನಂಜಪ್ಪ ನಿಡ್ಯಮಲೆ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಮೈಸೂರು – ಕೊಡಗು ಲೋಕಸಭಾ ಸಂಸದ ಪ್ರತಾಪ್ ಸಿಂಹ ಅವರು ದೀಪಬೆಳಗಿಸಿ, ಉದ್ಘಾಟಿಸಿದರು.


ವೇದಿಕೆಯಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಜಿ. ಭೋಪಯ್ಯ, ಕೊಡಗು ಜಿಲ್ಲೆ ಬಿಜೆಪಿ ವಕ್ತಾರ ಮಹೇಶ್ ಜೈನ್, ಪ್ರಸನ್ನ ಕೋಡಿರಾ, ಗಿರೀಶ್, ಪೆರಾಜೆ ಸಹಕಾರಿ ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಚಂದ್ರಕಲಾ ಬಳ್ಳಡ್ಕ, ಬಿಜೆಪಿ ಮಡಿಕೇರಿ ಗ್ರಾಮಾಂತರ ಮಂಡಲ ಕಾರ್ಯದರ್ಶಿ ಪ್ರಸನ್ನ ನೆಕ್ಕಿಲ, ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ, ತಾಲೂಕು ಅಧ್ಯಕ್ಷ ಅಶ್ವಿನ್ ಕಾಂಗಿರಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


ಪೆರಾಜೆ ಬಿಜೆಪಿ ಶಕ್ತಿಕೇಂದ್ರದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.