ಚೆಂಬು : ಬಿಜೆಪಿ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

0

ಜೆ.ಡಿ.ಎಸ್. ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

ಚೆಂಬು ಬಿಜೆಪಿ ಶಕ್ತಿಕೇಂದ್ರದ ಕಾರ್ಯಕರ್ತರ, ಮತದಾರರ, ಚುನಾಯಿತ ಪ್ರತಿನಿಧಿಗಳ ಸಭೆಯು ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಜು.1ರಂದು ಮಧ್ಯಾಹ್ನ ಜರುಗಿತು.

ಚೆಂಬು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸುಬ್ರಹ್ಮಣ್ಯ ಉಪಾಧ್ಯಾಯ ಅವರು ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮವನ್ನು ಮೈಸೂರು – ಕೊಡಗು ಲೋಕಸಭಾ ಸಂಸದ ಪ್ರತಾಪ್ ಸಿಂಹ ಅವರು ದೀಪಬೆಳಗಿಸಿ, ಉದ್ಘಾಟಿಸಿ, ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಜೆ.ಡಿ.ಎಸ್. ಕಾರ್ಯಕರ್ತರಾದ ಭಾಸ್ಕರ ಅರಂಬೂರು, ಕಾಚೇಲು ಪೊನ್ನಪ್ಪ, ಮಾದವ ನಿಡಿಂಜಿ, ಸುನಿಲ್ ಕುಮಾರ್ ಕಟ್ಟಪಾರೆ ಜೆ.ಡಿ.ಎಸ್. ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.


ದೇವಾಲಯ , ಕುದ್ರೆಪಾಯ, ಓಟೆಕೊಲ್ಲಿ, ಉಂಬಳೆ ಮಾರ್ಗವಾಗಿ ಸಡಕ್ ರಸ್ತೆ ನಿರ್ಮಾಣಕ್ಕಾಗಿ ಈ ಸಂದರ್ಭದಲ್ಲಿ ಸಂಸದರಿಗೆ ಮನವಿ ಸಲ್ಲಿಸಲಾಯಿತು.

ವೇದಿಕೆಯಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಜಿ. ಭೋಪಯ್ಯ, ಕೊಡಗು ಜಿಲ್ಲೆ ಬಿಜೆಪಿ ವಕ್ತಾರ ಮಹೇಶ್ ಜೈನ್, ಪ್ರಸನ್ನ ಕೋಡಿರಾ, ಗಿರೀಶ್, ಪೆರಾಜೆ ಸಹಕಾರಿ ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎನ್.ಸಿ. ಅನಂತ, ಬಿಜೆಪಿ ಮಡಿಕೇರಿ ಗ್ರಾಮಾಂತರ ಮಂಡಲ ಕಾರ್ಯದರ್ಶಿ ಪ್ರಸನ್ನ ನೆಕ್ಕಿಲ, ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ, ತಾಲೂಕು ಅಧ್ಯಕ್ಷ ಅಶ್ವಿನ್ ಕಾಂಗಿರಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಚೆಂಬು ಬಿಜೆಪಿ ಶಕ್ತಿಕೇಂದ್ರದ ನೂರಾರು ಮಂದಿ ಕಾರ್ಯಕರ್ತರು ಉಪಸ್ಥಿತರಿದ್ದರು. ಮಧ್ಯಾಹ್ನ ಭೋಜನದ ವ್ಯವಸ್ಥೆ ಮಾಡಲಾಗಿತ್ತು. ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸುಬ್ರಹ್ಮಣ್ಯ ಉಪಾಧ್ಯಾಯ ಸ್ವಾಗತಿಸಿ, ಚೆಂಬು ಗ್ರಾ.ಪಂ. ಮಾಜಿ ಸದಸ್ಯ ರಮೇಶ್ ನಂಬಿಯಾರ್ ವಂದಿಸಿದರು.