ಜು.6: ಬೆಳ್ಳಾರೆಯಲ್ಲಿ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 9ನೇ ಶಾಖೆ ಪ್ರಾರಂಭ

0

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿಯವರಿಂದ ಉದ್ಘಾಟನೆ

ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘ ಇದರ ಪ್ರಾಯೋಜಕತ್ವದಲ್ಲಿ ಪ್ರಾರಂಭಗೊಂಡಿರುವ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘವು 8 ಕಡೆ ಶಾಖೆಗಳನ್ನು ಹೊಂದಿದ್ದು 9ನೇ ಶಾಖೆಯು ಜು.6ರಂದು ಬೆಳ್ಳಾರೆಯ ಕಾತ್ಯಾಯಿನಿ ಕಾಂಪ್ಲೆಕ್ಸ್ ನಲ್ಲಿ ಉದ್ಘಾಟನೆಗೊಳ್ಳಲಿದೆ.

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಇದರ ಕಾವೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರು ನೂತನ ಶಾಖೆಯನ್ನು ಉದ್ಘಾಟಿಸಿ, ಆಶೀರ್ವಚನ ನೀಡಲಿದ್ದಾರೆ.

ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಸುಳ್ಯ ನೂತನ ಶಾಸಕಿ ಭಾಗೀರಥಿ ಮುರುಳ್ಯ ,ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು, ಒಕ್ಕಲಿಗ ಗೌಡ ಸೇವಾ ಸಂಘದ ಪುತ್ತೂರು ತಾಲೂಕು ಅಧ್ಯಕ್ಷ ವಿಶ್ವನಾಥ ಗೌಡ ಕೆಯ್ಯೂರು, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಶ್ರೀಮತಿ ತ್ರಿವೇಣಿ ರಾವ್ ಕೆ, ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ, ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆ ಇದರ ಸಂಚಾಲಕ ಎಂ.ಪಿ.ಉಮೇಶ್, ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ, ಕಾತ್ಯಾಯಿನಿ ಕಾಂಪ್ಲೆಕ್ಸ್ ಮಾಲಕ ಬಿ. ಪವನ್ ಶೆಣೈ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.