ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

ಸಂಸತ್ತಿನ ಪದಾಧಿಕಾರಿಗಳಿಂದ ಪ್ರಮಾಣ ವಚನ ಸ್ವೀಕಾರ

0

ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ 2023-24ನೇ ಸಾಲಿನ ವಿದ್ಯಾರ್ಥಿ ಸಂಸತ್ತನ್ನು ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ ಜು.1ರಂದು ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಉಪಾಧ್ಯಕ್ಷ ಶ್ರೀನಾಥ್ ರೈ ಬಾಳಿಲ ವಹಿಸಿದರು. ಮುಖ್ಯ ಅತಿಥಿಗಳಾಗಿ ಪುರಂದರ ನಾರಾಯಣ ಭಟ್ ಭಾಗವಹಿಸಿದರು. ಕಾಲೇಜ್ ವಿಭಾಗದ ಪದಾಧಿಕಾರಿಗಳಿಗೆ ಪ್ರಾಂಶುಪಾಲ ವಿಶ್ವನಾಥ ಗೌಡ ಪಿ ಪ್ರಮಾಣ ವಚನ ಬೋಧಿಸಿದರು.

ಉಪಪ್ರಾಂಶುಪಾಲರಾದ ಉಮಾಕುಮಾರಿಯವರು ಸ್ವಾಗತಿಸಿ, ಪ್ರೌಢ ವಿಭಾಗದ ವಿದ್ಯಾರ್ಥಿ ಸಂಸತ್ತು ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಶಿಕ್ಷಕರಾದ ರಾಮಚಂದ್ರ ಭಟ್ ಎಂ ಶುಭಹಾರೈಸಿದರು. ವೇದಿಕೆಯಲ್ಲಿ ಪೋಷಕರಾದ ಶರತ್ ಪೂಗವನ, ಹರಿಶ್ಚಂದ್ರ ಪಿ., ಕಾಲೇಜಿನ ವಿದ್ಯಾರ್ಥಿನಾಯಕ ಹರ್ಷರಾಜ್, ಉಪನಾಯಕಿ ಸಮೀಕ್ಷಾ, ಪ್ರೌಢ ವಿಭಾಗದ ನಾಯಕ ಕಾರ್ತಿಕ್, ಉಪನಾಯಕಿ ಡಯಾನ ವೈ ಶೆಟ್ಟಿ ಉಪಸ್ಥಿತರಿದ್ದರು. ಶಿಕ್ಷಕರಾದ ಮಿಯ್ಯಗೆ ಬಿ ವಂದಿಸಿದರು. ಸಂಸತ್ತಿನ ಎಲ್ಲಾ ಪದಾಧಿಕಾರಿಗಳು ಪ್ರಮಾಣವಚನ ಸ್ವೀಕರಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಪುಷ್ಪಾವತಿ ಪಿ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರು, ಶಿಕ್ಷಕ ವೃಂದದವರು ಸಹಕರಿಸಿದರು.