ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಯೋಗೇನ ಚಿತ್ತಸ್ಯ ಯೋಗ ಕೇಂದ್ರಕ್ಕೆ ಹಲವು ಪ್ರಶಸ್ತಿ

0

ಯೋಗಗುರು ಸಂತೋಷ್ ರಿಗೆ ಸ್ನೇಹಮಯಿ ಯೋಗ ಆಚಾರ್ಯ ಪ್ರಶಸ್ತಿ

ಸ್ನೇಹಮಯಿ ವಿವೇಕಾನಂದ ಯೋಗ ಕೇಂದ್ರ ಕಡೂರು ಇವರು ನಡೆಸಿದ ಮುಕ್ತ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸುಳ್ಯದ ಯೋಗೇನ ಚಿತ್ತಸ್ಯ ಯೋಗ ಕೇಂದ್ರದ ಯೋಗಪಟುಗಳಿಗೆ ಹಲವಾರು ಪ್ರಶಸ್ತಿ ಲಭಿಸಿದೆ.

8 ರಿಂದ 12 ನೇ ವಯೋಮಾನದ ಬಾಲಕರ ವಿಭಾಗದಲ್ಲಿ ತನುಷ್ ಕೆ ಆರ್ ದ್ವಿತೀಯ ಸ್ಥಾನ, ತನುಷ್ ಮೋಂಟಡ್ಕ ತೃತೀಯ ಸ್ಥಾನ, 5 ರಿಂದ 7ನೇ ವಯೋಮಾನದ ಬಾಲಕರ ವಿಭಾಗದಲ್ಲಿ ಆಶ್ರಿತ್ ಎ.ಸಿ ಚತುರ್ಥ ಸ್ಥಾನ ಪಡೆದಿರುತ್ತಾರೆ.


8 ರಿಂದ 12ನೇ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಸೋನಾ ಅಡ್ಕಾರ್ ತೃತೀಯ ಸ್ಥಾನ, ತನ್ವಿ ಪಿ. ರೈ ಚತುರ್ಥ ಸ್ಥಾನ ಹಾಗೂ ಎರಡು ಸುತ್ತಿನಲ್ಲಿ ನಡೆದ ವೈಯಕ್ತಿಕ ಚಾಂಪಿಯನ್ ವಿಭಾಗದಲ್ಲಿ ಸೋನಾ ಅಡ್ಕಾರ್ ಚತುರ್ಥ ಸ್ಥಾನ ಗಳಿಸಿರುತ್ತಾರೆ.
ಪ್ರತೀ ಜಿಲ್ಲೆಯಿಂದ ಓರ್ವರನ್ನು ಆಯ್ಕೆ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯದ ಯೋಗೇನ ಚಿತ್ತಸ್ಯ ಯೋಗ ಕೇಂದ್ರದ ಗುರುಗಳಾದ ಸಂತೋಷ್ ಮುಂಡಕಜೆ ಯವರಿಗೆ 2023 ರ ಸ್ನೇಹಮಯಿ ಯೋಗ ಆಚಾರ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.