ಸೋಣಂಗೇರಿ: ಅಪಾಯಕಾರಿ ಮರಗಳ ತೆರವುಗೊಳಿಸುವಂತೆ ಸ್ಥಳೀಯರ ಆಗ್ರಹ

0

ಜಾಲ್ಸೂರು ಗ್ರಾಮದ ಸೋಣಂಗೇರಿಯ ಶ್ರೀಕೃಷ್ಣ ಭಜನಾ ಮಂದಿರದ ಬಳಿ ದೂಪದ ಮರವೊಂದು ಬೀಳುವ ಹಂತದಲ್ಲಿದ್ದು, ಅಪಾಯಕಾರಿಯಾಗಿದೆ.

ರಸ್ತೆ ಅಗಲೀಕರಣ ಕಾಮಗಾರಿಯ ವೇಳೆ ಮರದ ಬುಡದಿಂದ ಮಣ್ಣನ್ನು ತೆಗೆಯಲಾಗಿದ್ದು, ಇದೀಗ ನಿರಂತರ ಮಳೆ ಸುರಿಯುತ್ತಿರುವ ಕಾರಣದಿಂದಾಗಿ ಮರದ ಬುಡದಲ್ಲಿ ಇರುವ ಮಣ್ಣು ಕುಸಿಯುತ್ತಿದೆ.

ಸೋಣಂಗೇರಿಯ ಈ ಪರಿಸರದಲ್ಲಿ ರಸ್ತೆ ಕಾಮಗಾರಿ ಸಂದರ್ಭದಲ್ಲಿ ಜೆಸಿಬಿ ಮೂಲಕ ಮರದ ಬುಡಗಳಿಂದ ಮಣ್ಣು ತೆಗೆಯಲಾಗಿದ ದು, ಒಟ್ಟು ಮೂರು ಮರಗಳು ರಸ್ತೆಗೆ ಬೀಳುವ ಹಂತದಲ್ಲಿದ್ದು, ಇದನ್ನು ತೆರವುಗೊಳಿಸುವಂತೆ ಸ್ಥಳೀಯ ನಿವಾಸಿಗಳು ಆಗ್ರಹಿಸಿದ್ದಾರೆ.