ಕೂರ್ನಡ್ಕ: ಪಾಲ ದಾಟುತ್ತಿರುವ ವೇಳೆ ನೀರು ಪಾಲಾದ ಕೂಲಿ ಕಾರ್ಮಿಕನ ಶೋಧ ಕಾರ್ಯ

0

ಎನ್.ಡಿ.ಆರ್.ಎಫ್., ಅಗ್ನಿ ಶಾಮಕ ದಳದ ಜಂಟಿ ಕಾರ್ಯಾಚರಣೆ

ಧಾರಾಕಾರ ಸುರಿಯುತ್ತಿರುವ ಮಳೆಯ ಮಧ್ಯೆ ನಿನ್ನೆ ಆಲೆಟ್ಟಿಯ ಕೂರ್ನಡ್ಕ ಬಳಿ ನೀರು ಪಾಲಾದ ಕೂಲಿ ಕಾರ್ಮಿಕನ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ.

ಹೊಳೆಯ ಪಾಲ ದಾಟುತ್ತಿರುವ ಸಂದರ್ಭದಲ್ಲಿ ಕೂಲಿ ಕಾರ್ಮಿಕರಾಗಿರುವ ಕೇರಳದ ಪಾಲಾ ಮೂಲದ ನಾರಾಯಣ ಎಂಬವರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರು.

ಸ್ಥಳಕ್ಕೆ ಸುಳ್ಯ ಅಗ್ನಿ ಶಾಮಕ ದಳದವರು ಹಾಗೂ ಪೋಲಿಸರು‌ ಧಾವಿಸಿದ್ದರು.‌ ಸುಳ್ಯ ತಹಶೀಲ್ದಾರ್ ಸಹಿತ ಅಧಿಕಾರಿಗಳು ಕೂಡಾ ಸ್ಥಳಕ್ಕೆ ಬಂದಿದ್ದರು.

ಇಂದು ಎನ್.ಡಿ.ಆರ್.ಎಫ್. ಮತ್ತು‌ ಅಗ್ನಿಶಾಮಕ ದಳದವರು ನೀರುಪಾಲಾದ ವ್ಯಕ್ತಿಯ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.