ಕುಕ್ಕುಜಡ್ಕ: ಅಮರ ಸಹಕಾರ ಸದನದಲ್ಲಿ ಶಾಸಕಿ ಕು.ಭಾಗೀರಥಿ ಮುರುಳ್ಯ ರಿಗೆ ಅಭಿನಂದನಾ ಸಮಾರಂಭ

0

ಅಮರಮುಡ್ನೂರಿನ ಕುಕ್ಕುಜಡ್ಕದಲ್ಲಿರುವ ಚೊಕ್ಕಾಡಿ‌ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಮರ ಸಹಕಾರ ಸದನದಲ್ಲಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿಯಾಗಿರುವ ಕು.ಭಾಗೀರಥಿ ಮುರುಳ್ಯರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭವನ್ನು ಜು.1 ರಂದು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ , ಅಮರಮುಡ್ನೂರು ಪಂಚಾಯತ್ ಅಧ್ಯಕ್ಷೆ ಪದ್ಮಪ್ರಿಯ ಮೇಲ್ತೋಟ, ಜಿ.ಪಂ.ಮಾಜಿ ಸದಸ್ಯ ಎಸ್.ಎನ್.ಮನ್ಮಥ,
ಶಕ್ತಿಕೇಂದ್ರದ ಅಧ್ಯಕ್ಷ ತಿಮ್ಮಪ್ಪ ಗೌಡ ಕೊಂಡೆಬಾಯಿ , ಮಹೇಶ್ ರೈ ಮೇನಾಲ ವೇದಿಕೆಯಲ್ಲಿದ್ದರು.
ಈ ಸಂದರ್ಭದಲ್ಲಿ ಚೊಕ್ಕಾಡಿ ಉಳ್ಳಾಕುಲು ದೇವಸ್ಥಾನದ ರಸ್ತೆ ಕಾಂಕ್ರೀಟಿಕರಣ ಹಾಗೂ ದೊಡ್ಡತೋಟ ಪಾಜಪಳ್ಳ ಕಡೆಗೆ ಕೆ‌ಎಸ್.ಆರ್.ಟಿ.ಸಿ ಬಸ್ಸಿನ ವ್ಯವಸ್ಥೆ ಕಲ್ಪಿಸುವಂತೆ ಶಾಸಕರಿಗೆ ತಿಮ್ಮಪ್ಪ ಕೊಂಡೆಬಾಯಿ ಯವರು ಮನವಿ ನೀಡಿದರು.
ಅಮರಮುಡ್ನೂರು ಮತ್ತು ಅಮರಪಡ್ನೂರು ಗ್ರಾಮದ ಬಿಜೆಪಿ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಲಾಯಿತು.

ಚೊಕ್ಕಾಡಿ‌ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರು, ಅಮರಮುಡ್ನೂರು ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

ಸೊಸೈಟಿ ನಿರ್ದೇಶಕ ಅರುಣ್ ನಾಯರ್ ಕಲ್ಲು ಸ್ವಾಗತಿಸಿದರು. ಪಂಚಾಯತ್ ಸದಸ್ಯ ಜನಾರ್ದನ ಪೈಲೂರು ವಂದಿಸಿದರು.