ಸಹಕಾರಿ ಸಂಘದ ಮಾಜಿ ನಿರ್ದೇಶಕ ಕಾಂಗ್ರೆಸ್ ಪಕ್ಷದ ಹಿರಿಯ ಧುರೀಣ ದಿ.ಭೂತಕಲ್ಲು ಸೀತಾರಾಮ ಗೌಡ ರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶ್ರದ್ಧಾಂಜಲಿ

0

ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ನಿರ್ದೇಶಕ,ಆಲೆಟ್ಟಿ ಪಂಚಾಯತ್ ಮಾಜಿ ಸದಸ್ಯರು, ಕಾಂಗ್ರೆಸ್ ಪಕ್ಷದ ಹಿರಿಯ ಧುರೀಣರಾಗಿದ್ದ ದಿ.ಭೂತಕಲ್ಲು ಸೀತಾರಾಮ ಗೌಡ ರವರಿಗೆ ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ದಿ.ಅಂಗಾರ ಮೊರಂಗಲ್ಲು ರವರಿಗೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಪಕ್ಷದ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಪಕ್ಷದ ಕಚೇರಿಯಲ್ಲಿ ಜು.12 ರಂದುಹಮ್ಮಿಕೊಳ್ಳಲಾಯಿತು.

ಸುಳ್ಯಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ರವರು ಮೃತರ ಬಗ್ಗೆ ನುಡಿ ನಮನ ಸಲ್ಲಿಸಿದರು. ಕೆ.ಪಿ.ಸಿ.ಸಿ.ಮಾಜಿ ಕಾರ್ಯದರ್ಶಿ ನ್ಯಾಯವಾದಿ ಎಂ.ವೆಂಕಪ್ಪ ಗೌಡ, ಬ್ಲಾಕ್ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಜಿ.ಪಂ.ಮಾಜಿ ಸದಸ್ಯ ದೇವಪ್ಪ ನಾಯ್ಕ್ ಕೂರ್ನಡ್ಕ, ಕೆ.ಪಿ.ಸಿ.ಸಿ ಅಲ್ಪ ಸಂಖ್ಯಾತ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಂ.ಮುಸ್ತಫ,ಆಲೆಟ್ಟಿ ಸೊಸೈಟಿ ಮಾಜಿ ಅಧ್ಯಕ್ಷ ಎಸ್.ಎಂ.ಬಾಪು ಸಾಹೇಬ್, ಆಲೆಟ್ಟಿ ಪಂಚಾಯತ್ ಸದಸ್ಯ ಮುತ್ತಪ್ಪ ಪೂಜಾರಿ ಮೊರಂಗಲ್ಲು, ಸತ್ಯ ಕುಮಾರ್ ಆಡಿಂಜ, ಧರ್ಮಪಾಲ ಕೊಯಿಂಗಾಜೆ, ಶ್ರೀಮತಿ ಗೀತಾ ಕೋಲ್ಚಾರು, ಶ್ರೀಮತಿ ಮೀನಾಕ್ಷಿ ಕುಡೆಕಲ್ಲು, ಮಾಜಿ ಸದಸ್ಯೆ ಶ್ರೀಮತಿ ಜಯಂತಿ, ನಗರ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಅಂಬೆಕಲ್ಲು, ಕಿಸಾನ್ ಘಟಕದ ಅಧ್ಯಕ್ಷ ಸುರೇಶ್ ಅಮೈ, ಅಸಂಘಟಿತ ಕಾರ್ಮಿಕರ ಘಟಕದ ಅಧ್ಯಕ್ಷ ಚಂದ್ರಲಿಂಗಂ, ಬಾಲಕೃಷ್ಣ ಪೂಜಾರಿ, ಸೋಮಶೇಖರ ಭೂತಕಲ್ಲು, ವಿಜಯಕುಮಾರ್ ಆಲೆಟ್ಟಿ,ಗಣೇಶ್ ನಾಗಪಟ್ಟಣ, ಚಂದ್ರಕಾಂತ ನಾರ್ಕೋಡು, ತೇಜಕುಮಾರ್ ಬಡ್ಡಡ್ಕ ಉಪಸ್ಥಿತರಿದ್ದು ಮೃತರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.