ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾಟರ್ ಬೆಡ್ ವಿತರಣೆ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ವಲಯದ ಪರಿವಾರಕಾನ ಕಾರ್ಯಕ್ಷೇತ್ರದ ಹೇಮಶ್ರೀ ಗುಂಪಿನ ಸದಸ್ಯೆ ಜಯಂತಿಯವರ ತಾಯಿ ಶ್ರೀಮತಿ ಗಿರಿಜಾರವರ ಅನಾರೋಗ್ಯ ಕಾರಣಕ್ಕೆ ಕ್ಷೇತ್ರದ ಜನಮಂಗಳ ಕಾರ್ಯಕ್ರಮದ ಸಲಕರಣೆಗೆ ಬೇಡಿಕೆ ಸಲ್ಲಿಸಿದ್ದು, ಪ್ರಸ್ತುತ ಕ್ಷೇತ್ರದಿಂದ ಮಂಜೂರಾಗಿ ಬಂದ ವಾಟರ್ ಬೆಡ್‌ನ್ನು ಗಿರಿಜಾ ರವರ ಮನೆಯಲ್ಲಿ ವಿತರಣೆ ಮಾಡಲಾಯಿತು.


ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕರಾದ ಶ್ರೀಮತಿ ಪ್ರಿಯಾ, ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಸುರೇಶ್, ಒಕ್ಕೂಟದ ಅಧ್ಯಕ್ಷರಾದ ಬಾಲಚಂದ್ರ, ನಿಕಟಪೂರ್ವ ಅಧ್ಯಕ್ಷರಾದ ಗಣೇಶ್, ಹಾಗೂ ಗುಂಪಿನ ಸದಸ್ಯರಾದ ಹರೀಶ್ ಮೊದಲಾದವರು ಉಪಸ್ಥಿತರಿದ್ದರು.