ದೇರಾಜೆ ಶಾಲಾ ನಿವೃತ್ತ ಶಿಕ್ಷಕ ಮೋಹನ ಕೆಯವರಿಗೆ ಸನ್ಮಾನ – ಬೀಳ್ಕೊಡುಗೆ

0

ಐವರ್ನಾಡು ಗ್ರಾಮದ ದೇರಾಜೆ ಕಿ.ಪ್ರಾ.ಶಾಲಾ ಶಿಕ್ಷಕ ಮೋಹನ ಕೆ ಯವರು ಜೂ.30 ರಂದು ಸೇವಾ ನಿವೃತ್ತಿಹೊಂದಿದ್ದು ಅವರಿಗೆ ಸನ್ಮಾನ ಹಾಗೂ ಬೀಳ್ಕೊಡುವ ಕಾರ್ಯಕ್ರಮವು ಜು.17 ರಂದು ದೇರಾಜೆ ಶಾಲೆಯಲ್ಲಿ ನಡೆಯಿತು.


ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ದಾಸಪ್ಪ ಗೌಡರವರು ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.


ನಿವೃತ್ತರಾದ ಶಿಕ್ಷಕ ಮೋಹನ ಕೆಯವರನ್ನು ಶಾಲು ಹೊದಿಸಿ,ಫಲ ಪುಷ್ಪ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿದ ಶಿಕ್ಷಕ ಮೋಹನರವರು ತಾನು ಸುದೀರ್ಘವಾಗಿ ಸೇವೆ ಸಲ್ಲಿಸಿದ ದಿನಗಳನ್ನು ನೆನಪಿಸಿ,ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.


ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಶ್ರೀಮತಿ ಪ್ರೇಮಾರವರು ಸನ್ಮಾನ ಪತ್ರ ವಾಚಿಸಿದರು.
ಎಸ್.ಡಿ.ಎಂ.ಸಿ.ಮಾಜಿ ಅಧ್ಯಕ್ಷೆ ‌ಶ್ರೀಮತಿ ಪವಿತ್ರಾ ಕೆ.ಪಿ.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ನಿವೃತ್ತಿ ಜೀವನಕ್ಕೆ ಶುಭಹಾರೈಸಿದರು.
ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಎಸ್.ಎನ್.ದೇವಿಪ್ರಸಾದ್, ನಳಿನಿ ಕೋಡ್ತೀಲು,ಅಂಗನವಾಡಿ ಕಾರ್ಯಕರ್ತೆ ವಿಜಯಲಕ್ಷ್ಮೀ ಉಪಸ್ಥಿತರಿದ್ದು ಶುಭಹಾರೈಸಿದರು.
ವಿದ್ಯಾರ್ಥಿಗಳು ಪ್ರಾರ್ಥಿಸಿ,ಶಾಲಾ ಎಸ್.ಡಿ.ಎಂ.ಸಿ.ಸದಸ್ಯೆ ಶ್ರೀಮತಿ ಪುಷ್ಪಾವತಿ ಕೋಡ್ತೀಲು ಸ್ವಾಗತಿಸಿ,ವಂದಿಸಿದರು.
ಶಿಕ್ಷಕಿ ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು.