ಕನಕಮಜಲು: ಚಿನ್ನಾಭರಣ ಕಳವಾದ ಮನೆಗೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

0

ಆರೋಪಿಗಳ ಶೀಘ್ರ ಬಂಧನಕ್ಕೆ ಪೊಲೀಸ್ ಇಲಾಖೆಗೆ ಸೂಚನೆ

ಕನಕಮಜಲು ಗ್ರಾಮದ ಬುಡ್ಲೆಗುತ್ತು ಯುರೇಶ್ ಅವರ ಮನೆಯಲ್ಲಿ ಜು.16ರಂದು ರಾತ್ರಿ ಚಿನ್ನಾಭರಣ ಕಳವಾಗಿದ್ದು, ಸ್ಥಳಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಅವರು ಜು.19ರಂದು ಅಪರಾಹ್ನ ಭೇಟಿ ನೀಡಿದರು.

ಯುರೇಶ್ ಬುಡ್ಲೆಗುತ್ತು ಅವರ ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವಾಗಿದ್ದು, ಪೊಲೀಸ್ ತನಿಖೆ ಪ್ರಗತಿಯಲ್ಲಿದ್ದು, ಶಾಸಕರು ಮಾಹಿತಿ ಕೇಳಿ ಪಡೆದುಕೊಂಡರಲ್ಲದೇ, ಆದಷ್ಟು ಶೀಘ್ರವಾಗಿ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದರೆಂದು ತಿಳಿದುಬಂದಿದೆ.

ಈ ಸಂದರ್ಭದಲ್ಲಿ ಕನಕಮಜಲು ಗ್ರಾ.ಪಂ. ಅಧ್ಯಕ್ಷ ಶ್ರೀಧರ ಕುತ್ಯಾಳ ಸೇರಿದಂತೆ ಬಿಜೆಪಿ ನಾಯಕರು ಹಾಗೂ ಯುರೇಶ್ ಬುಡ್ಲೆಗುತ್ತು ಅವರ ಕುಟುಂಬಸ್ಥರು ಉಪಸ್ಥಿತರಿದ್ದರು.