ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಸಂಭ್ರಮದಲ್ಲಿ ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನ

0

ಸುಳ್ಯ ಕೇರ್ಪಳದ ಬಂಟರ ಭವನದಲ್ಲಿ ನಡೆದ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಸಂಭ್ರಮದ ಸಮಾರೋಪ ಸಮಾರಂಭದಲ್ಲಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರನ್ನು ಸನ್ಮಾನಿಸಿ ಗೌರವಿಸಲಾಯಿತು.


ಹಿರಿಯ ಪತ್ರಕರ್ತರಾದ ಡಾ.ಯು.ಪಿ.ಶಿವಾನಂದ ಹಾಗೂ ಮಾಜಿ ಅಧ್ಯಕ್ಷ ಗಂಗಾಧರ ಮಟ್ಟಿ ಅವರಿಗೆ ವಿಶೇಷ ಸನ್ಮಾನ ನೀಡಿ ಗೌರವಿಸಲಾಯಿತು. ಸಂಘದ ಮಾಜಿ ಅಧ್ಯಕ್ಷರಾದ ಜೆ.ಕೆ.ರೈ, ಹರೀಶ್ ಬಂಟ್ವಾಳ್, ದುರ್ಗಾಕುಮಾರ್ ನಾಯರ್‌ಕೆರೆ, ಲೋಕೇಶ್ ಪೆರ್ಲಂಪಾಡಿ, ಸಂಶುದ್ದೀನ್ ಸಂಪ್ಯ, ಗಂಗಾಧರ ಕಲ್ಲಪಳ್ಳಿ, ದೇವಪ್ಪ ಹೈದಂಗೂರು, ಗಿರೀಶ್ ಪೆರುಮುಂಡ, ಜಯಪ್ರಕಾಶ್ ಕುಕ್ಕೇಟ್ಟಿ, ಗಿರೀಶ್ ಅಡ್ಪಂಗಾಯ, ಶಿವಪ್ರಸಾದ್ ಕೇರ್ಪಳ, ಶರೀಫ್ ಜಟ್ಟಿಪಳ್ಳ, ತೇಜೇಶ್ವರ ಕುಂದಲ್ಪಾಡಿ, ಮುರಳೀಧರ ಅಡ್ಡನಪಾರೆ, ಕೃಷ್ಣಬೆಟ್ಟ, ಪದ್ಮನಾಭ ಮುಂಡೋಕಜೆ ಹಾಲಿ ಅಧ್ಯಕ್ಷ ದಯಾನಂದ ಕೊರತ್ತೋಡಿ ಅವರನ್ನು ಸನ್ಮಾನಿಸಲಾಯಿತು.


ಅಗಲಿದ ಪೂರ್ವಾಧ್ಯಕ್ಷರಾದ ಚೇತನ್‌ರಾಮ್ ಇರಂತಕಜೆ ಹಾಗೂ ಪ್ರಕಾಶ್ ಪರಿವಾರಕಾನ ಅವರ ಕುಟುಂಬದ ಸದಸ್ಯರನ್ನು ಗೌರವಿಸಲಾಯಿತು.
ಮಾಜಿ ಸಚಿವ ಎಸ್.ಅಂಗಾರ, ದ.ಕ‌.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸನ್ಮಾನ ನೆರವೇರಿಸಿದರು.
ಸುದ್ದಿಯಾನ ಡಿಜಿಟಲ್ ಮಾಧ್ಯಮದ ಸಂಪಾದಕ ಹರಿಪ್ರಸಾದ್ ಅಡ್ಪಂಗಾಯ, ದ.ಕ‌.ಜಿಲ್ಲಾ‌‌ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಮತ್ತಿತರರು ಉಪಸ್ಥಿತರಿದ್ದರು.