ಕೆವಿಜಿ ಅಮರ ಜ್ಯೋತಿ ಪಿಯು ಕಾಲೇಜಿನಲ್ಲಿ ಸಿ ಎ ಫೌಂಡೇಶನ್ ತರಗತಿಗೆ ಶುಭಾರಂಭ

0


ಅಮರ ಜ್ಯೋತಿ ಪಿಯು ಕಾಲೇಜಿನಲ್ಲಿ ಎರಡನೇ ಬಾರಿಗೆ ಸಿ ಎ ಫೌಂಡೇಶನ್ ತರಗತಿಗಳನ್ನ ಆಯೋಜಿಸಲಾಗಿದೆ. ಸುಳ್ಯದ ಪ್ರಸಿದ್ಧ ಲೆಕ್ಕ ಪರಿಶೋಧಕರಾದ ಶ್ರೀನಿಧಿ ಅವರ ಮಾರ್ಗದರ್ಶನ, ಅಮರ ಜ್ಯೋತಿ ಪಿಯು ಕಾಲೇಜಿನ ವಾಣಿಜ್ಯ ವಿಭಾಗ ಉಪನ್ಯಾಸಕರಾದ ದೀಕ್ಷಿತ್ ಎಂ ಕೆ ಅವರ ಸಂಯೋಜತ್ವದಲ್ಲಿ ತರಗತಿಗಳು ನಡೆಯಲಿವೆ. ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರ ಮುಂದಿನ ಭವಿಷ್ಯ, ಪರಿಶ್ರಮ, ಸಫಲತೆಯ ಬಗ್ಗೆ ಕಿವಿ ಮಾತನ್ನು ಹೇಳಿದರು.

ಉಪನ್ಯಾಸಕರಾದ ದೀಕ್ಷಿತ್ ಅವರು ಪರೀಕ್ಷೆಯ ಸ್ವರೂಪ, ಸಾಧಿಸುವ ಬಗ್ಗೆ ,ಪಠ್ಯದ ಬಗ್ಗೆ ಮಾಹಿತಿ ನೀಡಿದರು.ಲೆಕ್ಕ ಪರಿಶೋಧಕರಾದ ಶ್ರೀನಿಧಿ ಅವರು ಮಾತನಾಡಿ ವಿದ್ಯಾರ್ಥಿಗಳಿಗೆ ಸಿ ಎ ಫೌಂಡೇಶನ್ ಬಗ್ಗೆ ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು.


ಕಾರ್ಯಕ್ರಮಕ್ಕೆ ಕಾಲೇಜಿನ ಮ್ಯಾನಜಿಂಗ್ ಟ್ರಸ್ಟಿ ಡಾ. ರೇಣುಕಾ ಪ್ರಸಾದ್ ಕೆ ವಿ, ಕಾಲೇಜಿನ ಸಿ ಇ ಒ ಡಾ.ಉಜ್ವಲ್ ಯು ಜೆ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ ಮತ್ತು ಉಪ ಪ್ರಾಂಶುಪಾಲರಾದ ದೀಪಕ್ ವೈ ಆರ್ ಹಾಗೂ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು.ಶ್ರೀಮತಿ ಮಲ್ಲಿಕಾ ಎಂ. ಎಲ್. ಕಾರ್ಯಕ್ರಮವನ್ನು ನಿರೂಪಿಸಿದರು.