ಸುಳ್ಯ ಲಯನ್ಸ್ ಕ್ಲಬ್ ವತಿಯಿಂದ ವನಮಹೋತ್ಸವ

0

ಸುಳ್ಯ ಲಯನ್ಸ್ ಕ್ಲಬ್, ಕೊಡಿಯಾಲಬೈಲು ಮಹಾತ್ಮಗಾಂಧಿ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಇದರ ಸಹಯೋಗದೊಂದಿಗೆ ವನಮಹೋತ್ಸವ ಕಾರ್ಯಕ್ರಮವು ನಡೆಯಿತು.


ಸುಳ್ಯ ವಲಯಾರಣ್ಯಾಧಿಕಾರಿ ಮಂಜುನಾಥ್ ಎನ್, ಗೌಡ ಸೋಶಿಯೋ ಎಜ್ಯುಕೇಶನ್ ಫೌಂಡೇಶನ್ ಅಧ್ಯಕ್ಷ ಚಂದ್ರ ಕೋಲ್ಚಾರ್, ಲಯನ್ ಪ್ರಾಂತ್ಯ ೭ ರ ಪ್ರಾಂತೀಯ ಅಧ್ಯಕ್ಷೆ ರೇಣುಕಾ ಸದಾನಂದ ಜಾಕೆ ಮುಖ್ಯ ಅತಿಥಿಗಳಾಗಿದ್ದರು.


ವನಮಹೋತ್ಸವ ಅಂಗವಾಗಿ ಶಾಲೆಯ ಆವರಣದಲ್ಲಿ ೧೬ ತೆಂಗಿನ ಗಿಡ ಹಾಗೂ ಹಣ್ಣುಗಳ ಗಿಡಗಳನ್ನು ನೆಡಲಾಯಿತು. ಶಾಲಾ ವಿದ್ಯಾರ್ಥಿಗಳ ಮನೆಯಲ್ಲಿ ಒಂದು ಗಿಡ ನೆಡಲು ಗಿಡಗಳನ್ನು ವಿತರಿಸಲಾಗುವುದೆಂದು ಲಯನ್ಸ್ ಕ್ಲಬ್ ಅಧ್ಯಕ್ಷ ವೀರಪ್ಪ ಗೌಡ ಕಣ್ಕಲ್ ತಿಳಿಸಿದರು.


ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಕಾರ್ಯದಶಿ ದೊಡ್ಡಣ್ಣ ಬರೆಮೇಲು, ಪೋಷಕರ ಸಮಿತಿ ಅಧ್ಯಕ್ಷೆ ಶ್ರೀಮತಿ ಪುಜಾ, ಉಪಾಧ್ಯಕ್ಷ ಗಣೇಶ್ ರೈ, ಲಯನ್ಸ್ ಜಿಲ್ಲಾ ಜಿ.ಎಂ.ಟಿ. ಕಾರ್ಡಿನೇಟರ್ ಜಯರಾಮ್ ದೇರಪ್ಪಜ್ಜನಮನೆ, ಪ್ರಾಂತೀಯ ರಾಯಭಾರಿ ಪ್ರೊ.ಬಾಲಚಂದ್ರ ಗೌಡ ಎಂ ಹಾಗೂ ಸದಸ್ಯರು, ಶಾಲಾ ಶಿಕ್ಷಕ ವರ್ಗ, ವಿದ್ಯಾರ್ಥಿಗಳು ಇದ್ದರು.