ದುಗ್ಗಲಡ್ಕ; ಮಿತ್ರ ಯುವಕ ಮಂಡಲ ಕೊಯಿಕುಳಿ ಮತ್ತು ಕುರಲ್ ತುಳುಕೂಟದ ವಾರ್ಷಿಕ ಮಹಾಸಭೆ

0


ದುಗ್ಗಲಡ್ಕದ ಮಿತ್ರ ಯುವಕ ಮಂಡಲ ಕೊಯಿಕುಳಿ ಮತ್ತು ಕುರಲ್ ತುಳುಕೂಟದ ವಾರ್ಷಿಕ ಮಹಾಸಭೆ ಜು.23ರಂದು ದುಗ್ಗಲಡ್ಕದ ಯುವಕ ಮಂಡಲದ ಕಟ್ಟಡದಲ್ಲಿ ನಡೆಯಿತು.


ವೇದಿಕೆಯಲ್ಲಿ ಕುರಲ್ ತುಳುಕೂಟದ ಸಂಚಾಲಕ ಕೆ.ಟಿ.ವಿಶ್ವನಾಥ, ಗೌರವಾಧ್ಯಕ್ಷ ನಾರಾಯಣ ಟೈಲರ್, ಅಧ್ಯಕ್ಷೆ ನವ್ಯದಿನೇಶ್ ಕೊಯಿಕುಳಿ, ಕಾರ್ಯದರ್ಶಿ ಮನೋಜ್ ಪಾನತ್ತಿಲ,ಮಿತ್ರ ಯುವಕ ಮಂಡಲದ ಗೌರವಾಧ್ಯಕ್ಷ ದಿನೇಶ್ ಕೊಯಿಕುಳಿ, ಅಧ್ಯಕ್ಷ ಚೇತನ್ ಕಲ್ಮಡ್ಕ,ಕಾರ್ಯದರ್ಶಿ ಪ್ರದೀಪ್ ಕೊಯಿಕುಳಿ ಉಪಸ್ಥಿತರಿದ್ದರು.


ಕಾರ್ಯದರ್ಶಿಗಳಾದ ಮನೋಜ್ ಪಾನತ್ತಿಲ ಮತ್ತು ಪ್ರದೀಪ್ ಕೊಯಿಕುಳಿ ವರದಿ ವಾಚಿಸಿದರು. ಕೋಶಾಧಿಕಾರಿಗಳಾದ ಶೇಖರ್ ಕುದ್ಪಾಜೆ ಮತ್ತು ಚಿದಾನಂದ ಕೊಯಿಕುಳಿ ಲೆಕ್ಕಪತ್ರ ಮಂಡಿಸಿದರು‌. ಈಗಿರುವ ಕಾರ್ಯಕಾರಿ ಸಮಿತಿಯನ್ನೇ ಮುಂದಿನ ಸಾಲಿಗೂ ಮುಂದುವರಿಸುವುದೆಂದು ತೀರ್ಮಾನಿಸಲಾಯಿತು.


ಮುಂದಿನ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಗಿಯಿತು.
ಸಂಚಾಲಕ ಕೆ‌.ಟಿ.ವಿಶ್ವನಾಥ ಶುಭ ಹಾರೈಸಿದರು‌.ಭವಾನಿಶಂಕರ ಕಲ್ಮಡ್ಕ ಕಾರ್ಯಕ್ರಮ ನಿರೂಪಿಸಿದರು.