ಭಾರೀ ಮಳೆ: ಮದೆನಾಡಿನಲ್ಲಿ ಭೂಕುಸಿತ

0

ಮಡಿಕೇರಿ-ಮಂಗಳೂರು ಹೆದ್ದಾರಿ ಬಂದ್

ಕಳೆದ ಕೆಲವು ದಿನಗಳಿಂದ ಕೊಡಗಿನಾದ್ಯಂತ ಸುರಿಯುತ್ತಿರುವ ಭಾರಿ ಮಳೆಗೆ ಮದೆನಾಡು ಸಮೀಪ ಕರ್ತೋಜೆಯಲ್ಲಿ ಮರ ಸಹಿತ ಭೂ ಕುಸಿತ ಉಂಟಾಗಿ ಮಣಿ ಮೈಸೂರು ರಸ್ತೆ ಸಂಚಾರ ಸ್ಥಗಿತಗೊಂಡಿದೆ ಎಂದು ತಿಳಿದು ಬಂದಿದೆ. ಮತ್ತಷ್ಟು ಕುಸಿಯು ಆತಂಕ ಎದುರಾಗಿದ್ದು
ಹೆದ್ದಾರಿಯಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿರುವ ದೃಶ್ಯ ಕಂಡುಬಂದಿದೆ.

ಜಿಲ್ಲಾಡಳಿತ ಕೂಡಲೆ ಕಾರ್ಯಪ್ರವೃತ್ತರಾಗಿ ಜೆಸಿಬಿ-ಹಿಟಾಚಿ ಯಂತ್ರ ಬಳಿಸಿ ಕಾರ್ಯಾಚರಣೆಯ ಕಾರ್ಯ ಆರಂಭಗೊಳಿಸಿದೆ. ಮಳೆಯ ನಡುವೆ ಕಾರ್ಯಾಚರಣೆ ಮುಂದುವರಿದಿದ್ದು
ಕೊಯನಾಡು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿ ಇರುವುದಾಗಿ ತಿಳಿದು ಬಂದಿದೆ.