ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಸುಬ್ರಹ್ಮಣ್ಯ ಉದ್ಘಾಟನೆ

0

ಸಾರ್ವಜನಿಕ ಉಚಿತ ವೈದ್ಯಕೀಯ ತಪಾಸಣಾ ಶಿಬಿರ,190 ಮಂದಿ ಭಾಗಿ

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಸುಬ್ರಹ್ಮಣ್ಯ ಹಾಗೂ ಕೆ‌ವಿ.ಜಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ಸಾರ್ವಜನಿಕ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಜು.23 ರಂದು ಸುಬ್ರಹ್ಮಣ್ಯ ಗ್ರಾ.ಪಂ ನ ರಾಜೀವ ಗಾಂಧಿ ಕಟ್ಟಡದಲ್ಲಿ ನಡೆಯಿತು. ಇದೇ ಸಂದರ್ಭ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಸುಬ್ರಹ್ಮಣ್ಯ ಇದರ ಉದ್ಘಾಟನೆ ನಡೆಸಲಾಯಿತು.

ಶಿಭಿರದಲ್ಲಿ 190 ಮಂದಿ ಭಾಗಿಗಳಾಗಿ ಶಿಬಿರದ ಪ್ರಯೋಜನ ಪಡೆದರು.

ಕಾರ್ಯಕ್ರಮವನ್ನು ರಘರಾಮ ಅಮ್ಮಣ್ಣಾಯ, ನಿವೃತ್ತ ಅಧ್ಯಾಪಕ ದೊಡ್ಡಣ್ಣ ಗೌಡ ಹಾಗೂ , ನಿವೃತ್ತ ರೈಲ್ವೆ ಉದ್ಯೋಗಿ ರಾಘವ ಗೌಡ ಕೆದಿಲ, ಟ್ರಸ್ಟ್ ಅಧ್ಯಕ್ಷ ಡಾ. ರವಿಕಕ್ಕೆಪದವು ಮತ್ತು ಶ್ರೀಮತಿ ಗೀತಾ ದಂಪತಿಗಳು, ಟ್ರಸ್ಟ್ ಕಾರ್ಯದರ್ಶಿ ಸುರೇಶ್ ಜಾದೇವ್ ದೀಪ ಬೆಳಗಿಸಿ ಉದ್ಘಾಟಿಸಿದರು. ರವಿಕಕ್ಕೆಪದವು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷೆ ಲಲಿತಾ ಗುಂಡಡ್ಕ, ವಿಶ್ವನಾಥ ನಡುತೋಟ, ಗೋಪಾಲ ಎಣ್ಣೆಮಜಲು, ರವೀಂದ್ರ ರುದ್ರಪಾದ, ಮೋಹನ ದಾಸ್ ರೈ , ಡಾ.ಪ್ರಜ್ವಲ್ ಉಪಸ್ಥಿತರಿದ್ದರು.