ಪಂಜ: ಮರದ ರೆಂಬೆ ಮುರಿದು ಬಿದ್ದು ವಿದ್ಯುತ್ ಲೈನ್ ಗೆ ಹಾನಿ

0

ಮರದ ರೆಂಬೆ ಮುರಿದು ಬಿದ್ದು ವಿದ್ಯುತ್ ಲೈನ್ ಗೆ ಬಿದ್ದು ಅಪಾರ ಹಾನಿಯಾದ ಘಟನೆ ಜು.25 ರಾತ್ರಿ
ಪಂಜದಿಂದ ವರದಿಯಾಗಿದೆ.

ಪಂಜದ ಕೃಷ್ಣನಗರದಲ್ಲಿ ಜು.25 ರಾತ್ರಿ ಸುಮಾರು 11 ಗಂಟೆ ವೇಳೆಗೆ ರಾಜ್ಯ ಹೆದ್ದಾರಿ ಬದಿಯಲ್ಲಿ ಇದ್ದ ಮರದ ರೆಂಬೆ ಮುರಿದು ಬಿದ್ದಿದೆ. ಪರಿಣಾಮವಾಗಿ ಅದರ ಅಡಿಯಲ್ಲಿ ಹಾದು ಹೋಗುವ ವಿದ್ಯುತ್ ತಂತಿ ರಸ್ತೆಗೆ ಬಿದ್ದಿದ್ದು, ವಿದ್ಯುತ್ ಕಂಬ ಮುರಿದಿದೆ. ತಕ್ಷಣ ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ರಸ್ತೆಯಲ್ಲಿದ್ದ ವಿದ್ಯುತ್ ತಂತಿಯನ್ನು ತೆರವು ಗೊಳಿಸಿದರು.


ವಿದ್ಯುತ್ ತಂತಿ ರಸ್ತೆಯಲ್ಲಿ ಇದ್ದುದರಿಂದ ಸ್ವಲ್ಪ ಹೊತ್ತು ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು.