ಪೈಚಾರು ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪುತ್ತೂರು ಶಾಸಕರಿಗೆ ಸನ್ಮಾನ

0

ಸುಳ್ಯದ ಪೈಚಾರಿನಲ್ಲಿ ಕಳೆದ ಹಲವಾರು ವರ್ಷಗಳಿಂದ ಸಾಮಾಜಿಕ ಕ್ಷೇತ್ರದಲ್ಲಿ ಸೇವೆಯನ್ನು ಸಲ್ಲಿಸುತ್ತಿರುವ ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ರೈ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾl ಬಶೀರ್ ಆರ್ ಬಿ ಅವರು ಶಾಸಕರಾದ ಅಶೋಕ್ ರೈ ಅವರನ್ನು ಪುತ್ತೂರಿನ ಅವರ ಕಚೇರಿಯಲ್ಲಿ ಭೇಟಿಯಾಗಿ ಸನ್ಮಾನಿಸಿದ್ದಾರೆ.
ಈ ಸಂದರ್ಭದಲ್ಲಿ ಟ್ರಸ್ಟಿನ ಪ್ರೋತ್ಸಾಹಕರಾದ ಇಬ್ರಾಹಿಂ ಒಡಬಾಯಿ,ಸಿದ್ದಿಕ್ ಶಾಂತಿನಗರ ಮೊದಲಾದವರು ಉಪಸ್ಥಿತರಿದ್ದರು.