ಇಂದು ವಿರಾಜಪೇಟೆ ಶಾಸಕ, ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಸಂಪಾಜೆ, ಚೆಂಬು ಮತ್ತು ಪೆರಾಜೆ ಗ್ರಾಮಗಳಿಗೆ ಭೇಟಿ

0

ಜುಲೈ 27ರಂದು ವಿರಾಜ್ ಪೇಟೆ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ. ಎಸ್. ಪೊನ್ನಣ್ಣ ಸಂಪಾಜೆ, ಚೆಂಬು ಮತ್ತು ಪೆರಾಜೆ ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ. ಜುಲೈ 27ರಂದು ಸಂಪಾಜೆಯಲ್ಲಿ ಕಂದಾಯ ಕಚೇರಿ ಉದ್ಘಾಟನೆ, ಹಲವು ಕಾಮಗಾರಿಗಳ ಉದ್ಘಾಟನೆ, ಸಂಪಾಜೆ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ, ವಲಯ ಕಾರ್ಯಕರ್ತರ ಸಭೆ, ನಂತರ 1:30ಕ್ಕೆ ಊರುಬೈಲು ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ, ಜನಸ್ಪಂದನ ಕಾರ್ಯಕ್ರಮ, ಸಂಜೆ 4:30ಕ್ಕೆ ಪೆರಾಜೆ ಶಾಸ್ತವೇಶ್ವರ ದೇವಸ್ಥಾನಕ್ಕೆ ಭೇಟಿ ನಂತರ ಪೆರಾಜೆ ಅನ್ನಪೂರ್ಣೇಶ್ವರಿ ಕಲಾ ಮಂದಿರದಲ್ಲಿ ವಲಯ ಕಾರ್ಯಕರ್ತರ ಸಭೆ ಮತ್ತು ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ.