ಸಂಪಾಜೆ : ಕಣ್ಣಿನ ಉಚಿತ ತಪಾಸಣ ಶಿಬಿರ

0


ದ. ಕ ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕರಿ ಸಂಘ, ಸಂಪಾಜೆ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಸಂಪಾಜೆ ಇದರ ಪ್ರಾಯೋಜಕತ್ವದಲ್ಲಿ ನ್ಯೂ ವಿಷನ್ ಜನರೇಷನ್ ಪ್ರೋಗ್ರಾಮ್ ಕಾರ್ಯಕ್ರಮದಡಿಯಲ್ಲಿ2.5 NVG
ಸುರತ್ಕಲ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಅಂದತ್ವ ವಿಭಾಗ ಇವರ ಜಂಟಿ ಆಶ್ರಯದಲ್ಲಿ ಕಣ್ಣಿನ ಉಚಿತ ತಪಾಸಣ ಶಿಬಿರವು ಜು. ೩೦ರಂದು ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಮನ್ವಯ ಸಭಾಂಗಣದಲ್ಲಿ ನಡೆಯಿತು.


ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆಯವರು ವಹಿಸಿದ್ದರು. ಜಿಲ್ಲಾ ವ್ಯವಸ್ಥಾಪಕರಾದ ಹೇಮಚಂದ್ರ ರವರು ಶಿಬಿರದ ಮಾಹಿತಿಯನ್ನು ನೀಡಿದರು. ಮುಖ್ಯ ಕಾರ್ಯನಿರ್ವಾಹನಣಾಧಿಕಾರಿ ವೀರೇಂದ್ರ ಕುಮಾರ್ ಜೈನ್, ನಿರ್ದೇಶಕರಾದ ಜಗದೀಶ್ ರೈ ಕೆ ಆರ್, ಆನಂದ ಪಿ ಎಲ್, ಯಮುನಾ ಬಿ ಎಸ್, ಗಣಪತಿ ಭಟ್ ಪಿಎನ್, ಸುಮತಿ ಶಕ್ತಿ ವೇಲು, ರಾಜೀವ್ ಬೈಲೆ ಪಾಲ್ಗೊಂಡಿದ್ದರು. ಈಗಾಗಲೇ ಸುಮಾರು ೧೪೦ಕ್ಕೂ ಹೆಚ್ಚು ಜನರು ಶಿಬಿರದ ಪ್ರಯೋಜನ ಪಡೆದರು. ಸಿಬ್ಬಂದಿಗಳು ಸಹಕರಿಸಿದರು.