ಸಂಪಾಜೆ: ಯಾದವ ಸಭಾ ಪ್ರಾದೇಶಿಕ ಸಮಿತಿ ಮಹಾಸಭೆ

0

ಸಂಪಾಜೆ ಯಾದವ ಸಭಾ ಪ್ರಾದೇಶಿಕ ಸಮಿತಿಯ ಮಹಾಸಭೆಯು ಸಂಪಾಜೆ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜು.30ರಂದು ಜರುಗಿತು.
ಪ್ರಾದೇಶಿಕ ಸಮಿತಿ ಅಧ್ಯಕ್ಷ ನಾರಾಯಣ ಬಾಲೆಂಬಿ ಅವರು ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಸಮಿತಿ ಕಾರ್ಯದರ್ಶಿ ಕೃಷ್ಣ ಬೆಟ್ಟ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.


ಮುಖ್ಯ ಅತಿಥಿಗಳಾಗಿ ಯಾದವ ಸಭಾ ಕೇಂದ್ರ ಸಮಿತಿ ಉಪಾಧ್ಯಕ್ಷ ವಿ.ವಿ. ಬಾಲನ್, ಸುಳ್ಯ ತಾಲೂಕು ಸಮಿತಿ ಕಾರ್ಯದರ್ಶಿ ಕೃಷ್ಣ ಬೆಟ್ಟ, ಬೆಂಗಳೂರು ಆರಕ್ಷಕ ಠಾಣಾ ಪೊಲೀಸ್ ರವಿ ಕೈಪಡ್ಕ, ಯಾದವಾ ಸಭಾ ಮಹಿಳಾ ಸಮಿತಿ ಅಧ್ಯಕ್ಷೆ ಶ್ರೀಮತಿ ಸಾವಿತ್ರಿ ಗೂನಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಭೆಯಲ್ಲಿ ಇತ್ತೀಚೆಗೆ ಆಶಾ ಕಾರ್ಯಕರ್ತೆಯಾಗಿ ಆಯ್ಕೆಗೊಂಡ ಶ್ರೀಮತಿ ಆಶಾ ವಿ‌ನಯ್ ಗೂನಡ್ಕ , ಬೆಂಗಳೂರಿನ ಆರ್.ಎ.ಎಸ್.ಮೀಡಿಯಾ & ಎಂಟರ್ಟೈನ್ಮೆಂಟ್ ಜಾಹೀರಾತು ಸಂಸ್ಥೆಗೆ ಆಯ್ಕೆಯಾದ ಸಮೃದ್ಧಿ ಎಸ್. ಅವರನ್ನು ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಪುಟಾಣಿಗಳಿಗೆ ಮತ್ತು ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ಶಾಲಾ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಲಾಯಿತು.
ಶ್ರೀಮತಿ ಆಶಾ ಗೂನಡ್ಕ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಆಶಾ ವಿನಯ್ ವಂದಿಸಿದರು.