ಯೋಗದಲ್ಲಿ ಜ್ಞಾನದೀಪ ಎಲಿಮಲೆಯ ವಿದ್ಯಾರ್ಥಿ ತನುಷ್ ಎಂ. ಎಚ್. ರಾಜ್ಯಮಟ್ಟಕ್ಕೆ

0

ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಸರಸ್ವತಿ ವಿದ್ಯಾಲಯ ಕಡಬ ಇದರ ಸಂಯುಕ್ತ ಆಶ್ರಯದಲ್ಲಿ ದಿನಾಂಕ ಜುಲೈ 27ರಂದು ಸರಸ್ವತಿ ವಿದ್ಯಾಲಯ ಕಡಬದಲ್ಲಿ ನಡೆದ ವಿದ್ಯಾಭಾರತೀಯ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಯಲ್ಲಿ ಜ್ಞಾನದೀಪ ಎಲಿಮಲೆ ಶಾಲೆಯ 7 ನೇ ತರಗತಿಯ ವಿದ್ಯಾರ್ಥಿ ತನುಷ್ ಎಂ ಎಚ್. ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರು ಆಗಸ್ಟ್ 17 ಮತ್ತು 18 ರಂದು ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಯೋಗ ಸ್ಪರ್ಧೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ.