ಬೆಳ್ಳಾರೆ ರೋಟರಿ ಕ್ಲಬ್ ಆಶ್ರಯದಲ್ಲಿ ಕೋಟೆಮುಂಡುಗಾರು ಶಾಲೆಯಲ್ಲಿ ವನಮಹೋತ್ಸವ

0

ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಆಶ್ರಯದಲ್ಲಿ ಅರಣ್ಯ ಇಲಾಖೆ, ಕಳಂಜ ಗ್ರಾ.ಪಂ. ಸಹಭಾಗಿತ್ವದಲ್ಲಿ ಕೋಟೆಮುಂಡುಗಾರು ಸ.ಹಿ.ಪ್ರಾ. ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ವನಸಿರಿ ಆ. 2ರಂದು ನಡೆಯಿತು. ಪುತ್ತೂರು ವಲಯದ ವಲಯ ಅರಣ್ಯಾಧಿಕಾರಿ ಕಿರಣ್ ಬಿ.ಎಂ. ಮತ್ತು ಕಳಂಜ ಗ್ರಾ.ಪಂ. ಅಧ್ಯಕ್ಷ ಪ್ರಶಾಂತ್ ಕುಮಾರ್ ಕಿಲಂಗೋಡಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ಳಾರೆ ರೋಟರಿ ಕ್ಲಬ್‌ನ ಅಧ್ಯಕ್ಷ ಶಶಿಧರ್ ಬಿ.ಕೆ. ವಹಿಸಿದ್ದರು.

ಎಸ್.ಡಿ.ಎಂ.ಸಿ.‌ ಅಧ್ಯಕ್ಷ ಗಂಗಾಧರ ತೋಟದಮೂಲೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪದ್ಮಯ್ಯ ಕೆ, ಕಳಂಜ ಗ್ರಾ.ಪಂ. ಸದಸ್ಯ ಬಾಲಕೃಷ್ಣ ಬೇರಿಕೆ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮೋಹನಿ ಚೆನ್ನಪ್ಪ ಗೌಡ ಕಜೆಮೂಲೆ, ಬೆಳ್ಳಾರೆ ರೋಟರಿ ಕ್ಲಬ್ ಕಾರ್ಯದರ್ಶಿ ವಿಶ್ವನಾಥ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ‌ಸಹ ಶಿಕ್ಷಕಿ ರಾಣಿ ಕೆ.ಪಿ. ಕಾರ್ಯಕ್ರಮ ನಿರೂಪಿಸಿದರು. ರೋಟರಿ ಕ್ಲಬ್ ಬೆಳ್ಳಾರೆಯ ಪೂರ್ವಾಧ್ಯಕ್ಷ ನಿವೃತ್ತ ಯೋಧ ರವೀಂದ್ರ ಗೌಡ ಮರಕ್ಕಡ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು.

ಕಳಂಜ ಗ್ರಾ.ಪಂ. ಸಿಬ್ಬಂದಿ ಗಿರಿಧರ್ ವಂದಿಸಿದರು. ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಅರಣ್ಯ ಇಲಾಖೆಯ ಉಪವಲಯರಣ್ಯಾಧಿಕಾರಿ ಪ್ರಸಾದ್‌ ಕೆ.ಜೆ, ಬೆಳ್ಳಾರೆ ರೋಟರಿ ಕ್ಲಬ್‌ನ ಪ್ರಮೋದ್ ವೈಪಾಲ, ಅನಂತಕೃಷ್ಣ ತಂಟೆಪ್ಪಾಡಿ, ಪೂರ್ವಾಧ್ಯಕ್ಷ ವಿನಯ್ ಕುಮಾರ್ ಭಾರಧ್ವಾಜ್, ತಿಲಕ್ ತಂಟೆಪ್ಪಾಡಿ, ಕಳಂಜ ಬಾಳಿಲ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಬೇಬಿ ಕೆ.ಸಿ, ಶಾಲಾ ಎಸ್.ಡಿ.ಎಂ.ಸಿ. ಸದಸ್ಯರು, ಪೋಷಕರು, ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಶಾಲಾ ಮಕ್ಕಳಿಗೆ ಸುಮಾರು 50 ಗಿಡಗಳನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು. ರೋಟರಿ ಸಂಸ್ಥೆಯ ವತಿಯಿಂದ ಕಳಂಜ‌ ಗ್ರಾ.ಪಂ.‌ ಫೈಬರ್ ಚಯರ್ ಗಳನ್ನು ಕೊಡುಗೆಯಾಗಿ ನೀಡಲಾಯಿತು.