ಕಳಂಜ ಬಾಳಿಲ ಪ್ರಾ.ಕೃ. ಪತ್ತಿನ ಸಹಕಾರಿ ಸಂಘಕ್ಕೆ ರಾಜ್ಯ ಅಪೆಕ್ಸ್ ಬ್ಯಾಂಕಿನ ಜಿಎಂ ಭೇಟಿ

0

ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕಿನ ಜಿ.ಎಂ ವಸಂತ ಕುಮಾರ್ ಆ. 5ರಂದು ಭೇಟಿ ನೀಡಿ ಸಂಘದ ಪ್ರಗತಿ ಪರಿಶೀಲಿಸಿ ಸಂಘದ ಚಟುವಟಿಕೆಯ ಕುರಿತು ಚರ್ಚಿಸಿದರು. ಸಂಘದ ಅಧ್ಯಕ್ಷ ಎಂ. ಕೂಸಪ್ಪ ಗೌಡ ಮುಗುಪ್ಪು, ಉಪಾಧ್ಯಕ್ಷ ಕರುಣಾಕರ ರೈ ನಾಲ್ಗುತ್ತು, ನಿರ್ದೇಶಕರಾದ ಕೆ.ಎಲ್. ಸುಬ್ರಹ್ಮಣ್ಯ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ್ ನಾಯಕ್ ತಡಗಜೆ ಹಾಗೂ ಸಿಬ್ಬಂದಿಗಳೊಂದಿಗೆ ಮಾತನಾಡಿ, ಸಂಘದ ಅಭಿವೃದ್ಧಿಗೆ ಶ್ರಮಿಸುವಂತೆ ತಿಳಿಸಿದರು.