ದುಗ್ಗಲಡ್ಕ: ಕೊಯಿಕುಳಿ 2ನೇ ವಾರ್ಡ್ ನಲ್ಲಿ ಕಾಂಗ್ರೆಸ್ ಮುಖಂಡರಿಂದ ಸರಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮನೆ ಮನೆ ಭೇಟಿ ನೀಡಿ ಸಮೀಕ್ಷೆ

0

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರಕಾರದ ಮಹಾತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಈಗಾಗಲೇ ಗೃಹ ಜ್ಯೋತಿ, ಗೃಹ ಲಕ್ಷೀ, ಅನ್ನಭಾಗ್ಯ, ಶಕ್ತಿ ಯೋಜನೆಗಳು ಜಾರಿಯಾಗಿದ್ದು ಸರಕಾರದ ಈ ಮಹತ್ತರ ಯೋಜನೆಗಳನ್ನು ಮನೆ ಮನೆಗೆ ತಲುಪಿಸಲು ಮತ್ತು ಜನತೆಯನ್ನು ನೋಂದಣಿ ಮಾಡಲು ಪ್ರೆರೇಪಿಸಲು ಮನೆ ಮನೆ ಭೇಟಿ ನೀಡಿ ಜಾಗೃತಿ ಮೂಡಿಸಲು ಹಾಗೂ ಯೋಜನೆಗಳ ಪ್ರಯೋಜನಗಳ ಬಗ್ಗೆ ತಿಳಿಯಪಡಿಸಲು ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ 2ನೇ ವಾರ್ಡ್ ಕೊಯಿಕುಳಿಯಲ್ಲಿ ಕಾಂಗ್ರೆಸ್ ಮುಖಂಡರಿಂದ ಮನೆ ಮನೆ ಭೇಟಿ ನೀಡಿ ಸಮೀಕ್ಷೆ ನಡೆಸಲಾಯಿತು.

ಸುಳ್ಯ ನಗರ ಕಾಂಗ್ರೆಸ್ ಮಾಜಿ ಅಧ್ಯಕ್ಷ ಶಶಿಧರ್ ಎಂ ಜೆ, ಸುಳ್ಯ ಬ್ಲಾಕ್ ಮಾಜಿ ಕಾರ್ಯದರ್ಶಿ, ಮಾಜಿ ಮಾಧ್ಯಮ ಸಂಯೋಜಕ ಭವಾನಿ ಶಂಕರ್ ಕಲ್ಮಡ್ಕ, ಮಾಜಿ ನಗರ ಪಂಚಾಯತ್ ಸದಸ್ಯ ಇಬ್ರಾಹಿಂ ನೀರಬಿದಿರೆ, ಕೊಯಿಕುಳಿ ಬೂತ್ ಅಧ್ಯಕ್ಷ ಭಾಗೀಶ್ ಕೆ.ಟಿ ಮನೆ ಮನೆ ಭೇಟಿ ಅಭಿಯಾನದಲ್ಲಿ ಭಾಗವಹಿಸಿ ಸಮೀಕ್ಷೆ ನಡೆಸಿದರು.