ಗಾಂಧಿ ಚಿಂತನ ವೇದಿಕೆಯಿಂದ ಸುಳ್ಯದ ಅಮರ ಶಿಲ್ಪಿ ಕುರುಂಜಿ ವೆಂಕಟ್ರಮಣ ಗೌಡರ ಪುತ್ಥಳಿಗೆ ಗೌರವಾರ್ಪಣೆ

0


ಸುಳ್ಯದ ಭವ್ಯ ಶಿಲ್ಪಿ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಸ್ಥಾಪಕಾಧ್ಯಕ್ಷರಾದ ಡಾ.ಕುರುಂಜಿ ವೆಂಕಟ್ರಮಣ ಗೌಡರು ನಮ್ಮನ್ನಗಲಿ 10ವರುಷ ಸಂದಿದ್ದು, ಅವರಿಗೆ ಗೌರವ ಸಲ್ಲಿಸುವ ಪ್ರಯುಕ್ತ ಸುಳ್ಯದ ಖಾಸಗಿ ಬಸ್ ನಿಲ್ದಾಣ ಬಳಿ ಇರುವ ಅವರ ಪುತ್ಥಳಿಗೆ ಗಾಂಧಿ ಚಿಂತನ ವೇದಿಕೆಯ ವತಿಯಿಂದ ಪುಷ್ಪಾರ್ಚಣೆ ಮಾಡಿ ಗೌರವ ಸಲ್ಲಿಸಲಾಯಿತು.


ಗಾಂಧಿ ಚಿಂತನ ವೇದಿಕೆಯ ಪ್ರಧಾನ ಸಂಚಾಲಕ ಹರೀಶ್ ಬಂಟ್ವಾಳ್ ಸ್ವಾಗತಿಸಿದರು. ಕೆವಿಜಿ ಜನ್ಮ ದಿನಾಚರಣೆ ಸಮಿತಿ ಅಧ್ಯಕ್ಷರಾದ ಡಾ.ಎನ್.ಎ.ಜ್ಞಾನೇಶ್ ಮಾತನಾಡಿದರು.ಕೆ.ವಿ.ಜಿ.ಸುಳ್ಯ ಹಬ್ಬ‌ ಸಮಿತಿ ಹಾಗೂ ಕ.ಸ.ಪಾ.ಅಧ್ಯಕ್ಷ ಚಂದ್ರಶೇಖರ ಪೇರಾಲು, ಸುಳ್ಯ ಲಯನ್ಸ್ ಕ್ಲಬ್ ಕಾರ್ಯದರ್ಶಿ ದೊಡ್ಡಣ್ಣ ಬರೆಮೇಲು, ಶಿಕ್ಷಕ ಸುಂದರ ಕೇನಾಜೆ, ಕಾರ್ಮಿಕರ ಸಂಘದ ಉಪಾಧ್ಯಕ್ಷ ಮಂಜುನಾಥ ಬಳ್ಳಾರಿ, ಉದ್ಯಮಿ ಹರೀಶ್ ಉಬರಡ್ಕ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ಘಟಕದ ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ, ಕಾರ್ಯದರ್ಶಿ ರಮೇಶ್ ನೀರಬಿದಿರೆ, ಜಿಲ್ಲಾ ಉಪಾಧ್ಯಕ್ಷ ಶರೀಫ್ ಜಟ್ಟಿಪ್ಪಳ್ಳ, ಸಂಘಟನಾ ಕಾರ್ಯದರ್ಶಿ ಈಶ್ವರ್ ವಾರಣಾಶಿ, ಸದಸ್ಯ ಗಣೇಶ್ ಕುಕ್ಕುದಡಿ,ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಯಾನಂದ ಕೊರತ್ತೋಡಿ, ಕಾರ್ಯದರ್ಶಿ ಶಿವಪ್ರಸಾದ್ ಕೇರ್ಪಳ, ಸುದ್ದಿ ಕಚೇರಿ ವ್ಯವಸ್ಥಾಪಕ ಯಶ್ವಿತ್ ಕಾಳಂಮನೆ, ಬೃಂದಾ ಮುಕ್ಕೂರು ಮೊದಲಾದವರು ಉಪಸ್ಥಿತರಿದ್ದರು.