ಸಂಪಾಜೆ : ಗೃಹಲಕ್ಷ್ಮಿ,ಗೃಹ ಜ್ಯೋತಿ ಯೋಜನೆಯ ಅರ್ಜಿ ಸ್ವೀಕರಿಸಲು ಫಲಾನುಭವಿಗಳನ್ನು ಸತಾಯಿಸುತ್ತಿರುವ ಆರೋಪ

0

ಆ. 8ರಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ

ಸಂಪಾಜೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸರಕಾರದಿಂದ ಬಂದಿರುವಂತಹ ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಯೋಜನೆ ಅರ್ಜಿ ಸ್ವೀಕರಿಸಲು ಅಲ್ಲಿನ ಬಿಲ್ ಕಲೆಕ್ಟರ್ ಹರೀಶ್ ಎಂಬುವವರು ಫಲಾನುಭವಿಗಳಿಗೆ ಸತಾಯಿಸುತ್ತಿದ್ದು ಅರ್ಜಿ ಸಲ್ಲಿಸುವವರು ಅವರ ಮನೆಯ ತೆರಿಗೆ ಮತ್ತು ನೀರಿನ ಬಿಲ್ಲುಗಳನ್ನು ಕಟ್ಟದಿದ್ದರೆ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ಗದರಿಸುತ್ತಿದ್ದಾರೆ ಎಂಬ ಆರೋಪ ಮುಂದಿಟ್ಟು ಮಡಿಕೇರಿ ತಾಲೂಕು ಸಂಪಾಜೆ ಹೋಬಳಿ ಘಟಕದ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಿ. ಆಗಸ್ಟ್ 8 ರಂದು ಪ್ರತಿಭಟನೆ ಮಾಡುವುದಾಗಿ ಶಾಸಕ ಪೊನ್ನಣ್ಣ ಮತ್ತು ವಿವಿಧ ಇಲಾಖೆ ಅಧಿಕಾರಿಗಳಿಗೆ ಮನವಿ ಪತ್ರವನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.


ಈ ಪ್ರತಿಭಟನೆಯು ಬೆಳಿಗ್ಗೆ 10.30 ಕ್ಕೆ ಸಂಪಾಜೆ ಗೇಟ್ ನಿಂದ ಜಾತಾ ಮೂಲಕ ಆರಂಭಿಸಿ ಸಂಪಾಜೆ ಗ್ರಾಮ ಪಂಚಾಯತ್ ಮುಂಭಾಗದವರೆಗೆ ಬಂದು ಹರೀಶ್ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಲಾಗುವುದು ಮತ್ತು ನಮ್ಮ ಮನವಿಯನ್ನು ಸ್ವೀಕರಿಸುವವರೆಗೂ ಪ್ರತಿಭಟನೆಯನ್ನು ಮುಂದುವರಿಸಲಾಗುವುದು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.