ರಾಜ್ಯಶಾಸ್ತ ವಿಷಯದಲ್ಲಿ 1೦೦ಕ್ಕೆ 1೦೦ ಅಂಕ ಎಸ್‌ಎಸ್‌ಪಿಯು ಕಾಲೇಜಿನ ವಿದ್ಯಾರ್ಥಿನಿ ಸಂಜನಾ ಎನ್.ಎಸ್ ಅವರಿಗೆ ಗೌರವಾರ್ಪಣೆ

0

ಎಸ್‌ಎಸ್‌ಪಿಯು ಕಾಲೇಜಿನ ವಿದ್ಯಾರ್ಥಿನಿ ಸಂಜನಾ ಈ ಭಾರಿಯ ದ್ವಿತೀಯ ಪಿ.ಯು ಪರೀಕ್ಷೆಯಲ್ಲಿ ರಾಜ್ಯಶಾಸ್ತ ವಿಷಯದಲ್ಲಿ ೧೦೦ಕ್ಕೆ ೧೦೦ ಅಂಕ ಪಡೆದವರಾಗಿದ್ದು ಅವರನ್ನು ಮಂಗಳೂರಿನಲ್ಲಿ ನಡೆದ ರಾಜ್ಯಶಾಸ್ತ್ರ ವಿಷಯದ ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಗೌರವಿಸಲಾಯಿತು.

ಪದವಿಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ನಿರ್ದೇಶಕ ಜಯಣ್ಣ ಗೌರವಿಸಿ ಪ್ರಮಾಣಪತ್ರ ವಿತರಿಸಿ ಗೌರವಿಸಿದರು.
ಈ ಸಂದರ್ಭ ಮಂಗಳೂರು ವಿ.ವಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪಿ.ಎಲ್.ಧರ್ಮ, ಎಸ್‌ಎಸ್‌ಪಿಯು ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ಜಯಶ್ರೀ.ವಿ.ದಂಬೆಕೋಡಿ, ರಾಜ್ಯಶಾಸ್ತ್ರ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಚಂದ್ರನಾಥ ಎ ಉಪಸ್ಥಿತರಿದ್ದರು.