ಸಂಗೀತ ವರ್ಷಧಾರೆ ಮಳೆ ಹಾಡುಗಳ ಕಲರವ ಕಾರ್ಯಕ್ರಮ ಉದ್ಘಾಟನೆ

0


ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಭಾವನಾ ಸುಗಮ ಸಂಗೀತ ಬಳಗ ಮತ್ತು
ಸುವಿಚಾರ ಸಾಹಿತ್ಯ ಸಂಘ, ವಿದ್ಯಾ ಬೋಧಿನೀ ಪ್ರೌಢಶಾಲೆ ಬಾಳಿಲ ಇದರ ಆಶ್ರಯದಲ್ಲಿ ಸಂಗೀತ ವರ್ಷಧಾರೆ ಮಳೆ ಹಾಡುಗಳ ಕಲರವ ಕಾರ್ಯಕ್ರಮದ ಉದ್ಘಾಟನೆ ಆ‌.9ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ವಿದ್ಯಾ ಬೋಧಿನೀ ಸಂಸ್ಥೆಗಳ ಅಧ್ಯಕ್ಷರಾದ ರಾಧಾಕೃಷ್ಣರ ರಾವ್ ಯು ನಡೆಸಿ ಮಳೆ ಹಾಡುಗಳ ಕಲರವ ಕಾರ್ಯಕ್ರಮ ಮನಸ್ಸಿಗೆ ಮುದ ನೀಡಿ ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಸಕ್ತಿ ಮೂಡಿಸಲಿ ಎಂದು ಶುಭ ಹಾರೈಸಿದರು.


ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಳೆ ತಜ್ಞ ಹಾಗೂ ವಿಷ್ಲೇಹಕ ಪಿ ಜಿ.ಎಸ್ ಎನ್ ಪ್ರಸಾದ್ ಇವರನ್ನು ಅವರ ಸಾಧನೆಯನ್ನು ಗುರುತಿಸಿ ಕ ಸಾ ಪ ಸುಳ್ಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸಂಗೀತ ವರ್ಷಧಾರೆ ಮಳೆ ಕಲರವ ಕಾರ್ಯಕ್ರಮವನ್ನು ಭಾವನಾ ಸುಗಮ ಸಂಗೀತ ಬಳಗದ ಕೆ ಆರ್ ಗೋಪಾಲಕೃಷ್ಣ ಹಾಗೂ ಉಪನ್ಯಾಸಕಿ ಶ್ರೀಮತಿ ಸತ್ಯವತಿ ಇವರು ನಡೆಸಿಕೊಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ ಸಾ ಪ ಅಧ್ಯಕ್ಷ ಚಂದ್ರಶೇಖರ್ ಪೇರಾಲ್ ವಹಿಸಿ ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ವೇದಿಕೆಯಲ್ಲಿ ಕಸಾಪ ಕೋಶಾಧಿಕಾರಿ ದಯಾನಂದ ಆಳ್ವಉಪಸ್ಥಿತರಿದ್ದರು. ಮುಖ್ಯಶಿಕ್ಷಕ ಯಶೋಧರ ನಾರಾಲು ಸ್ವಾಗತಿಸಿ , ಅರವಿಂದ ಬಾಳಿಲ ವಂದಿಸಿದರು. ದಿನೇಶ್ ಕಾರ್ಯಕ್ರಮ ನಿರೂಪಿದರು.