ಪಾದಾಚಾರಿಗೆ ಗುದ್ದಿದ ಬೈಕ್, ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

0

ಪಾದಾಚಾರಿಗೆ ಬೈಕ್ ಗುದ್ದಿ ಗಾಯಗೊಂಡ ಘಟನೆ ಸುಳ್ಯದ ಬಸ್ ನಿಲ್ದಾಣದ ಬಳಿ ನಿನ್ನೆ ರಾತ್ರಿ (ಆಗಸ್ಟ್ 10ರಂದು) ಸಂಭವಿಸಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಯುವಕನೊಬ್ಬ ಸುಳ್ಯ ಪೇಟೆಯಿಂದ ಬೈಕ್ ನಲ್ಲಿ ಮುಖ್ಯ ರಸ್ತೆಯಲ್ಲಿ ಹೋಗುತ್ತಿದ್ದಾಗ ಬಸ್ ಸ್ಟ್ಯಾಂಡ್ ಬಳಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಗುದ್ದಿದ್ದಾನೆ. ಕಾಲಿಗೆ ಗಾಯವಾಗಿದ್ದು, ಗಾಯಾಳುವನ್ನು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಸುಳ್ಯದ ಹೋಟೆಲ್ ವೊಂದರಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ ಪೆರಾಜೆಯ ಶಬ್ಬೀರ್ (34 ವರ್ಷ) ಗಾಯಗೊಂಡ ವ್ಯಕ್ತಿ.

ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಲಭ್ಯವಿಲ್ಲದ ಹಿನ್ನೆಲೆಯಲ್ಲಿ ಗಾಯಾಳುವನ್ನು ಕೆವಿಜಿಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಬೈಕ್ ಚಲಾಯಿಸುತ್ತಿದ್ದ ಯುವಕನಿಗೂ ಗಾಯವಾಗಿದೆ ಎಂದು ತಿಳಿದುಬಂದಿದೆ.