ಸಂಪಾಜೆಯಲ್ಲಿ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ವತಿಯಿಂದ ಶ್ರಮದಾನ

0

ಕೊಡಗು ಸಂಪಾಜೆಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಸಂಪಾಜೆಯಲ್ಲಿ

ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಶ್ರದ್ದಾಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮವು ಆ. 13ರಂದು ನಡೆಯಿತು.

ಕೊಡಗು ಸಂಪಾಜೆ ಒಕ್ಕೂಟದ ಸದಸ್ಯರ ಶ್ರಮದಾನದ ಮೂಲಕ ಶಾಲೆಯ ಪರಿಸರದಲ್ಲಿ ಕಾಡು ಕಡಿದು ಸ್ವಚ್ಛತಾ ಕಾರ್ಯಕ್ರಮವನ್ನು ಮಾಡಿದರು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕರು ಹಾಗೂ ಗ್ರಾಮಪಂಚಾಯತ್ ಅದ್ಯಕ್ಷರಾದ ಶ್ರೀಮತಿ ರಮಾದೇವಿ ಬಾಲಚಂದ್ರ ಕಳಗಿಯವರು ಉಪಸ್ಥಿತರಿದ್ದರು.

ಒಕ್ಕೂಟದ ಸದಸ್ಯರು, ಪದಾಧಿಕಾರಿಗಳು ಮತ್ತು ಶೌರ್ಯ ವಿಪತ್ತು ಘಟಕದ ಸದಸ್ಯರು ಉಪಸಿತರಿದ್ದರು.