ಕರಿಕೆಯಲ್ಲಿ ಕ್ಯಾಂಪ್ಕೋ ಸದಸ್ಯ ಬೆಳೆಗಾರರ ಸಭೆ

0

ಕ್ಯಾಂಪ್ಕೋ ಹಾಗೂ ಕರಿಕೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಇದರ ಸಹಭಾಗಿತ್ವದೊಂದಿಗೆ ಕರಿಕೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಸದಸ್ಯ ಬೆಳೆಗಾರರ ಸಭೆ ಆ.14 ರಂದು ನಡೆಯಿತು. ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೊಡ್ಗಿ ಅವರು ಕಾಳುಮೆಣಸು ಖರೀದಿಗೆ ಚಾಲನೆ ನೀಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕ್ಯಾಂಪ್ಕೋದ ಬೆನ್ನೆಲುಬಾದ ರೈತರ ಮೂಲಕ ದೀಪ ಬೆಳಗಿಸಲಾಯಿತು. ಕ್ಯಾಂಪ್ಕೋದ ನಿರ್ದೇಶಕರಾದ ಕೃಷ್ಣ ಪ್ರಸಾದ್ ಮಡ್ತಿಲ ಅವರು ಸ್ವಾಗತಿಸಿದರು. ಕ್ಯಾಂಪ್ಕೋದ ವ್ಯವಸ್ಥಾಪಕ ನಿರ್ದೇಶಕರಾದ ಹೆಚ್. ಎಂ. ಕೃಷ್ಣ ಕುಮಾರ್ ಪ್ರಾಸ್ತಾವಿಕ ಭಾಷಣ ಮಾಡಿದರು.

ತದನಂತರ ಸದಸ್ಯ ಬೆಳೆಗಾರರ ಜೊತೆ ನಡೆದ ವಿಚಾರ ವಿನಿಮಯದಲ್ಲಿ ರೈತರ ಸಮಸ್ಯೆಗಳನ್ನು ಆಲಿಸಿ ಸಮರ್ಪಕ ಪರಿಹಾರಗಳನ್ನು ಸೂಚಿಸಿದರು. ಅಲ್ಲದೆ ಮಾರುಕಟ್ಟೆ ಸ್ಥಿರತೆಯಲ್ಲಿ ಕ್ಯಾಂಪ್ಕೋದ ಪಾತ್ರ ಹಾಗೂ ಸದಸ್ಯರಿಗೆ ಕ್ಯಾಂಪ್ಕೋದ ಹಲವಾರು ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಈ ಸಮಯದಲ್ಲಿ ಕರಿಕೆ ಪ್ರಾಥಮಿಕ ಕೃಷಿ ಪತ್ತಿನ ಸಂಘದ ಅಧ್ಯಕ್ಷರಾದ ಶರಣ್ ಕುಮಾರ್ ಬೇಕಲ್ ಅವರು ಮಾತನಾಡಿದರು.ಕ್ಯಾಂಪ್ಕೋ ಉಪಾಧ್ಯಕ್ಷರಾದ ಶಂಕರನಾರಾಯಣ ಭಟ್ ಖಂಡಿಗೆ ವಂದಿಸಿದರು.