ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ -ದತ್ತಿನಿಧಿ ಪುರಸ್ಕಾರ

0

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಆ.15ರಂದು ಆಚರಿಸಲಾಯಿತು.


ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಉಪಾಧ್ಯಕ್ಷ ಕತ್ತಾರ್ ಇಬ್ರಾಹಿಂ ಅವರು ಧ್ವಜಾರೋಹಣ ನೆರವೇರಿಸಿದರು.

ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಅಬ್ದುಲ್ ಖಾದರ್ ಸಿ.ಎಚ್., ಶಾಲಾ ಮುಖ್ಯಶಿಕ್ಷಕಿ ಜಯಲತಾ ಕೆ.ಆರ್., ಶಿಕ್ಷಕ ವೃಂದ, ಸಿಬ್ಬಂದಿ ವರ್ಗ, ವಿದ್ಯಾರ್ಥಿ ವೃಂದ ಉಪಸ್ಥಿತರಿದ್ದರು.
ಧ್ವಜಾರೋಹಣದ ನೇತೃತ್ವವನ್ನು ದೈಹಿಕ ಶಿಕ್ಷಣ ಶಿಕ್ಷಕ ಶಿವಪ್ರಸಾದ್ ಕೆ. ವಹಿಸಿದರು.
ದತ್ತಿನಿಧಿ ವಿತರಣೆ : ಬಳಿಕ ನಡೆದ ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯಶಿಕ್ಷಕಿ ಜಯಲತಾ ಕೆ.ಆರ್. ವಹಿಸಿದ್ದರು. ವೇದಿಕೆಯಲ್ಲಿ ಶಿಕ್ಷಕರಾದ ಶಿವಪ್ರಕಾಶ್.ಕೆ, ಕುಮಾರ್ ಲಮಾಣಿ, ಸವಿತಾ ಕುಮಾರಿ, ದೈಹಿಕ ಶಿಕ್ಷಣ ಶಿಕ್ಷಕ ಶಿವಪ್ರಸಾದ್.ಕೆ ಇದ್ದರು. ಬಳಿಕ ನಿವೃತ್ತ ಶಿಕ್ಷಕ ಹಾಗೂ ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಮಾಜಿ ಅಧ್ಯಕ್ಷ ಸುಂದರ ಮಾಸ್ತರ್ ಕೊಡಮಾಡುವ ದತ್ತಿನಿಧಿಯನ್ನು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.
ಇದೇ ಸಂದರ್ಭದಲ್ಲಿ ತಾಲೂಕು ಮಟ್ಟದ ಯೋಗ ಸ್ಪರ್ಧೆಯಲ್ಲಿ ವಿಜೇತರಾಗಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿ ಪುಣ್ಯಶ್ರೀ ಅವರನ್ನು ಗೌರವಿಸಲಾಯಿತು. ಶಿಕ್ಷಕಿ ಮೀನಕುಮಾರಿ ಕಾರ್ಯಕ್ರಮ ನಿರೂಪಿಸಿದರು. ಸಿಬ್ಬಂದಿ ಬೇಬಿ ಕೆ. ಕಾರ್ಯಕ್ರಮ ಕ್ಕೆ ಸಹಕರಿಸಿದರು. ವಿದ್ಯಾರ್ಥಿಗಳಿಂದ ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.