ಜಯನಗರ : ಕುದ್ಪಾಜೆ ಮುಖ್ಯ ರಸ್ತೆಗೆ ಉರುಳಿ ಬಿದ್ದ ಬೃಹತ್ ಮರ, ಸಂಚಾರ ಸ್ಥಗಿತ

0

ಜಯನಗರದಿಂದ ಕುದ್ಪಾಜೆಗೆ ಹೋಗುವ ಮುಖ್ಯ ರಸ್ತೆಗೆ ನಿನ್ನೆ ತಡ ರಾತ್ರಿ ಬೃಹತ್ ಮರ ಮುರಿದು ಬಿದ್ದಿದ್ದು ಈ ಭಾಗದ ರಸ್ತೆ ಸಂಚಾರ ಸ್ಥಗಿತಗೊಂಡಿದೆ.

ರಸ್ತೆಗೆ ಮರ ಬಿದ್ದ ಹಿನ್ನೆಲೆಯಲ್ಲಿ ಸ್ಥಳೀಯವಾಗಿ ಹಾದು ಹೋಗುತ್ತಿದ್ದ ವಿದ್ಯುತ್ ತಂತಿಗಳು, ಮತ್ತು ವಿದ್ಯುತ್ ಕಂಬ ಹಾನಿಗೊಂಡಿದೆ.

ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಈ ಘಟನೆ ಸಂಭವಿಸಿದ್ದು ಇನ್ನಿತರ ಯಾವುದೇ ಅಪಾಯಗಳು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.