ನಾವೂರು ಶ್ರೀ ಮಹಾಮ್ಮಾಯಿ ಅಮ್ಮನವರ ಕ್ಷೇತ್ರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

0

ನಾವೂರು ಶ್ರೀ ಮಹಾಮ್ಮಾಯಿ ಅಮ್ಮ ನವರ ಕ್ಷೇತ್ರದಲ್ಲಿ ಶ್ರೀ
ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗಾಂಧಿನಗರ ಒಕ್ಕೂಟದ ಸದಸ್ಯರಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮವು ಆ. 20 ರಂದು ನಡೆಯಿತು.

ಗಾಂಧಿನಗರ ಒಕ್ಕೂಟದ ಉಪಾಧ್ಯಕ್ಷರಾದ ಇಂದಿರಾ, ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರು ಈಶ್ವರ, ಆಡಳಿತ ಮಂಡಳಿಯ ಇತರ ಪದಾಧಿಕಾರಿಗಳು, ಸೇವಾ ಪ್ರತಿನಿಧಿ ಸೌಜನ್ಯ ಹಾಗೂ ಒಕ್ಕೂಟದ ಪದಾಧಿಕಾರಿಗಳು ಮತ್ತು ಸದಸ್ಯರು ಸೇರಿ ಒಟ್ಟು 50 ಜನ ಭಾಗವಹಿಸಿದ್ದರು. ಮಹಾಮ್ಮಾಯಿ
ದೇವಸ್ಥಾನದ ಒಳಾಂಗಣ ಮತ್ತು ಹೊರಾಂಗಣವನ್ನು ತೊಳೆದು ಶುಚಿಗೊಳಿಸಿದರು ಹಾಗೂ ಸುತ್ತ ಮುತ್ತಲಿನ ಕಾಡು ಕಡಿದು ಶುಚಿ ಮಾಡಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಸಮಿತಿಯಿಂದ ಶ್ರಮದಾನದಲ್ಲಿ ಪಾಲ್ಗೊಂಡ ಎಲ್ಲಾ ಸದಸ್ಯರಿಗೆ ಚಹಾ ತಿಂಡಿಯ ವ್ಯವಸ್ಥೆ ಮಾಡಲಾಯಿತು.