ಜಯನಗರ: ಶ್ರೀ ಗಜಾನನ ಭಜನಾ ಮಂದಿರದಲ್ಲಿ ನಾಗರ ಪಂಚಮಿ ಆಚರಣೆ

0

ಜಯನಗರ ಶ್ರೀ ಗಜಾನನ ಭಜನಾ ಮಂದಿರದ ನಾಗ ಸನ್ನಿಧಿಯಲ್ಲಿ ನಾಗರ ಪಂಚಮಿ ಪ್ರಯುಕ್ತ ಹಾಲೆರೆಯುವ ಕಾರ್ಯಕ್ರಮ ಆ.೨೧ರಂದು ಬೆಳಿಗ್ಗೆ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ಗಜಾನನ ದೇವರಿಗೆ ಪೂಜೆ, ಮಹಾಮಂಗಳಾರತಿ ಕಾರ್ಯಕ್ರಮ ಪುರೋಹಿತ ಶ್ರೀ ಹರಿ ಯಳಚಿತ್ತಾಯ ರವರ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಭಜನಾ ಮಂದಿರದ ಆಡಳಿತ ಸಮಿತಿಯ ಅಧ್ಯಕ್ಷ ಮಾಧವ ಟೈಲರ್, ಹಾಗೂ ಪದಾಧಿಕಾರಿಗಳು ಸದಸ್ಯರು,ಸ್ಥಳೀಯ ನೂರಾರು ಮಂದಿ ಭಕ್ತರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಊರ ಭಕ್ತಾದಿಗಳು ಉಪಸ್ಥಿತರಿದ್ದರು.