ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನಾಗಸಾನಿಧ್ಯದಲ್ಲಿ ನಾಗರಪಂಚಮಿ ಆಚರಣೆ

0

ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ನಾಗಸಾನಿಧ್ಯದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ಸಿಯಾಳ ಮತ್ತು ಹಾಲಭಿಷೇಕ ನಡೆಸಲಾಯಿತು.

ದೇವಸ್ಥಾನದ ಪ್ರಧಾನ ಅರ್ಚಕ ಈಶ್ವರ ಭಟ್ ಅವರ ನೇತೃತ್ವದಲ್ಲಿ ವಿವಿಧ ಪೂಜಾ ಕಾರ್ಯಗಳು ನೆರವೇರಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಮೊಕ್ತೇಸರ ಗುರುರಾಜ್ ಭಟ್ ಅಡ್ಕಾರು, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯರಾಮ ರೈ ಜಾಲ್ಸೂರು, ವ್ಯವಸ್ಥಾಪನ ಸಮಿತಿಯ ಸದಸ್ಯರುಗಳು, ಬೈಲುವಾರು ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.