ಮಿನುಂಗೂರು : ನಾಗರಪಂಚಮಿ‌ ಆಚರಣೆ

0

ಮರ್ಕಂಜ ಹಾಗೂ ನೆಲ್ಲೂರು ಕೆಮ್ರಾಜೆ ಗ್ರಾಮಗಳ ಪಂಚಸ್ಥಾಪನೆಗಳಿಗೊಳಟ್ಟ ಮಿನುಂಗೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಾಗರಪಂಚಮಿ ಆಚರಿಸಲಾಯಿತು. ಅರ್ಚಕ ಗಣೇಶ್ ಪ್ರಸಾದ್ ರವರು ತಂಬಿಲ ಪೂಜಾ ಕಾರ್ಯ ನೆರವೇರಿಸಿದರು.

ಈ ಸಂದರ್ಭದಲ್ಲಿ ದೇವಾಲಯದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕಮಲಾಕ್ಷ ಪುರ, ಅನ್ನಪೂರ್ಣ ಸಮಿತಿ ಅಧ್ಯಕ್ಷ, ಸದಸ್ಯರು, ಭಜನಾ ಮಂಡಳಿ ಅಧ್ಯಕ್ಷರು, ಸದಸ್ಯರು, ಊರ ಭಕ್ತರು ಪಾಲ್ಗೊಂಡು ಶ್ತೀ ದೇವರ ಪ್ರಸಾದ ಸ್ವೀಕರಿಸಿದರು.