ಮರ್ಕಂಜದ ಮಿತ್ತಡ್ಕ ಶಾಲೆಯಲ್ಲಿ ಸುದ್ದಿ ಸಮೂಹ ಸಂಸ್ಥೆ ಮತ್ತು ಷರಾ ಪ್ರಕಾಶನದ ವತಿಯಿಂದ ನಡೆದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣೆ

0

ಸುದ್ದಿ ಸಮೂಹ ಸಂಸ್ಥೆ, ಷರಾ ಪ್ರಕಾಶನ ಸುಳ್ಯ ಸಹಯೋಗದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಪ್ರಬಂದ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವು ಮರ್ಕಂಜದ ಮಿತ್ತಡ್ಕ ಸ. ಹಿ.ಪ್ರಾ.ಶಾಲೆಯಲ್ಲಿ ಆ.22 ರಂದು ನಡೆಯಿತು.
ಸುದ್ದಿ ಬಿಡುಗಡೆ ವ್ಯವಸ್ಥಾಪಕ ಯಶ್ವಿತ್ ಕಾಳಮ್ಮನೆ ಪ್ರಸ್ತಾವಿಕವಾಗಿ ಮಾತನಾಡಿದರು.
ಶಾಲಾ ದತ್ತಿನಿಧಿ ದಾನಿಗಳು ಮತ್ತು ಸುದ್ದಿ ಪ್ರತಿನಿಧಿ ದಾಮೋದರ ಪಾಟಾಳಿ ಹಾಗೂ ಶಿಕ್ಷಕಿ ರೋಹಿಣಿಯವರು ಬಹುಮಾನ ವಿತರಿಸಿದರು.
ಈ ಸಂದರ್ಭದಲ್ಲಿ ಸುದ್ದಿ ಪತ್ರಿಕೆಯ ವರದಿಗಾರರಾದ ಶಿವರಾಮ ಕಜೆಮೂಲೆ, ದಯಾನಂದ ಕೊರತ್ತೋಡಿ ಹಾಗೂ ಶಾಲಾ ಶಿಕ್ಷಕ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.